AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ

2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ದಿಂದ ಸಂಕಷ್ಟಕ್ಕೆ ಸಿಲುಕಿದ್ದ ಪೊಲೀಸ್​ ಇಲಾಖೆ ಸಿಬ್ಬಂದಿಗೆ ಇದೀಗ ಸುಹಿ ಸುದ್ದಿ ಸಿಕ್ಕಿದೆ.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 22, 2022 | 8:07 PM

Share

ಬೆಳಗಾವಿ: ಕರ್ನಾಟಕ ಪೊಲೀಸ್ ಇಲಾಖೆ (police Department) ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ್ ಜಿಲ್ಲಾ ವರ್ಗಾವಣೆಗೆ(inter district transfer) ಇದೀಗ ಅವಕಾಶ ನೀಡಲಾಗಿದೆ. ಇಂದು(ಡಿಸೆಂಬರ್ 22) ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.ಆದ್ರೆ, ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ, ಇನ್ಮುಂದೆ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣ

ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಹಾಗೂ ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು. ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.

ಮುಂಚೆ ಅವಕಾಶವಿತ್ತು

ರಾಜ್ಯ ನಾಗರಿಕ ಸೇವಾ ನಿಯಮ 16(ಎ) ಅನ್ವಯ ಈ ಹಿಂದೆ ಸೇವಾ ಜ್ಯೇಷ್ಠತೆ ಬಿಟ್ಟುಕೊಟ್ಟು ಬೇರೆ ಪೊಲೀಸ್‌ ವಲಯ, ಜಿಲ್ಲೆಗಳಿಗೆ ವರ್ಗಾವಣೆಯಾಗುವ ಅವಕಾಶವಿತ್ತು. ಪತಿ/ಪತ್ನಿ ಇಬ್ಬರು ಸರಕಾರಿ ನೌಕರರಾಗಿದ್ದರೆ, ಇಬ್ಬರೂ ಒಂದೇ ಜಿಲ್ಲೆಗೆ ವರ್ಗಾವಣೆ ಪಡೆಯಬಹುದಿತ್ತು. ಆದರೆ, 2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ಅಂತರ್ ವಲಯ ವರ್ಗಾವಣೆಗೆ ಅವಕಾಶ ಇರಲಿಲ್ಲ. ಇದರಿಂದ ಪಿಎಸ್‌ಐ, ಎಎಸ್‌ಐ, ಪೊಲೀಸ್‌ ಕಾನ್ಸ್‌ಟೆಬಲ್‌ಗಳು ಹಾಗೂ ಇಲಾಖೆಯ ಗ್ರೂಪ್‌ (ಸಿ) (ಡಿ)ವೃಂದ ಸಂಕಷ್ಟಕ್ಕೆ ಸಿಲುಕಿದ್ದರು. ಅಲ್ಲದೇ ದಂಪತಿ ‘ಕೌಟುಂಬಿಕ’ ಜೀವನಕ್ಕೆ ವಿಘ್ನ ಉಂಟಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:04 pm, Thu, 22 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?