AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಒಂದು ವರ್ಷದ ಬಳಿಕ ಆಹಾರ ಇಲಾಖೆ ಹೊಸ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಹೀಗಾಗಿ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿಸಲ್ಲಿಸಲು ಜನ ಮುಗಿಬೀಳುತ್ತಿದ್ದಾರೆ. ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು? ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ? ಇತ್ಯಾದಿ ವಿವರ ಇಲ್ಲಿದೆ.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
Poornima Agali Nagaraj
Poornima Agali Nagaraj| Edited By: |

Updated on: Jul 11, 2024 | 8:26 AM

Share

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ

ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು‌, ಬೆಂಗಳೂರು ಒನ್ ಸೆಂಟರ್​​ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ.

ಒಪನ್ ಆಗದ ವೆಬ್​​ಸೈಟ್

ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್​​ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್​ಸೈಟ್ ಒಪನ್ ಆಗುತ್ತಿದ್ದು, ಅರ್ಜಿ‌ ಮಾತ್ರ ರವಾನೆಯಾಗುತ್ತಿಲ್ಲ.‌ ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆಯೇ 56 ಕಡೆ ಲೋಕಾಯುಕ್ತ ದಾಳಿ

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್‌ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Poornima Agali Nagaraj
Poornima Agali Nagaraj
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ