AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಒಂದು ವರ್ಷದ ಬಳಿಕ ಆಹಾರ ಇಲಾಖೆ ಹೊಸ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಹೀಗಾಗಿ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿಸಲ್ಲಿಸಲು ಜನ ಮುಗಿಬೀಳುತ್ತಿದ್ದಾರೆ. ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು? ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ? ಇತ್ಯಾದಿ ವಿವರ ಇಲ್ಲಿದೆ.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
Poornima Agali Nagaraj
| Edited By: |

Updated on: Jul 11, 2024 | 8:26 AM

Share

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ

ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು‌, ಬೆಂಗಳೂರು ಒನ್ ಸೆಂಟರ್​​ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ.

ಒಪನ್ ಆಗದ ವೆಬ್​​ಸೈಟ್

ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್​​ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್​ಸೈಟ್ ಒಪನ್ ಆಗುತ್ತಿದ್ದು, ಅರ್ಜಿ‌ ಮಾತ್ರ ರವಾನೆಯಾಗುತ್ತಿಲ್ಲ.‌ ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆಯೇ 56 ಕಡೆ ಲೋಕಾಯುಕ್ತ ದಾಳಿ

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್‌ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ