ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಒಂದು ವರ್ಷದ ಬಳಿಕ ಆಹಾರ ಇಲಾಖೆ ಹೊಸ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದೆ. ಹೀಗಾಗಿ ಬಿಪಿಎಲ್ ಕಾರ್ಡ್​​​ಗಳಿಗೆ ಅರ್ಜಿಸಲ್ಲಿಸಲು ಜನ ಮುಗಿಬೀಳುತ್ತಿದ್ದಾರೆ. ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು? ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ? ಇತ್ಯಾದಿ ವಿವರ ಇಲ್ಲಿದೆ.

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ
Follow us
| Updated By: ಗಣಪತಿ ಶರ್ಮ

Updated on: Jul 11, 2024 | 8:26 AM

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ

ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು‌, ಬೆಂಗಳೂರು ಒನ್ ಸೆಂಟರ್​​ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ.

ಒಪನ್ ಆಗದ ವೆಬ್​​ಸೈಟ್

ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್​​ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್​ಸೈಟ್ ಒಪನ್ ಆಗುತ್ತಿದ್ದು, ಅರ್ಜಿ‌ ಮಾತ್ರ ರವಾನೆಯಾಗುತ್ತಿಲ್ಲ.‌ ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆಯೇ 56 ಕಡೆ ಲೋಕಾಯುಕ್ತ ದಾಳಿ

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್‌ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ