AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?

2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಇನ್ನೊಂದೆಡೆ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಊರಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲಿಂದ ಎಲ್ಲಿಯವರೆಗೆ? ಒಟ್ಟು ಎಷ್ಟು ದಿನ ರಜೆ? ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?
ಶಾಲಾ ವಿದ್ಯಾರ್ಥಿಗಳು
ರಮೇಶ್ ಬಿ. ಜವಳಗೇರಾ
|

Updated on: Sep 20, 2024 | 6:29 PM

Share

ಬೆಂಗಳೂರು, (ಸೆಪ್ಟೆಂಬರ್ 20): ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಅಕ್ಟೋಬರ್​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಇದನ್ನೂ ಓದಿ: Mysore Dasara 2024: ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಸಾಹಿತಿ ಹಂಪ ನಾಗರಾಜಯ್ಯ

ಮತ್ತೊಂದೆಡೆ, ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ, ಆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 13 ದಿನ ರಜೆ ಇರುವ ಸಾಧ್ಯತೆ ಇದೆ. ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆ ನೀಡಲಾಗುತ್ತದೆ.

ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಯಿತು. ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇರಲಿದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್