AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಗೆ ಅವಕಾಶ ನೀಡಿದ್ದು, 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆದರೆ ಸಾರಿಗೆ ಇಲಾಖೆ ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ನೀಡಿಲ್ಲ. 

ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 11, 2021 | 9:09 PM

Share

ಬೆಂಗಳೂರು: ಜೂನ್ 30ರವರೆಗೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿದೆ. ಮೋಟಾರು ವಾಹನ ತೆರಿಗೆ ದಂಡರಹಿತ ಪಾವತಿಗೆ ಅವಕಾಶ ನೀಡಲಾಗಿದ್ದು, ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಗೆ ಅವಕಾಶ ನೀಡಿದ್ದು, 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆದರೆ ಸಾರಿಗೆ ಇಲಾಖೆ ಹೊಸ ವಾಹನಗಳ ನೋಂದಣಿಗೆ ಯಾವುದೇ ವಿನಾಯಿತಿ ನೀಡಿಲ್ಲ.

ಇಂದಿನ ಕೊವಿಡ್ ಸೋಂಕಿತರೆಷ್ಟು? ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಸೋಂಕು ಪ್ರಕರಣಗಳು ಶುಕ್ರವಾರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. 2ನೇ ಅಲೆ ವ್ಯಾಪಕವಾಗಿ ಹರಡಿದ ನಂತರ ಇದೇ ಮೊದಲ ಬಾರಿಗೆ ಸೋಂಕಿತರ ಒಟ್ಟು ಸಂಖ್ಯೆ 9 ಸಾವಿರದ ಗಡಿಯಿಂದ ಕೆಳಗಿಳಿದಿದೆ. ಒಟ್ಟು 8,249 ಜನರಿಗೆ ಸೋಂಕು ದೃಢಪಟ್ಟಿದ್ದು, 159 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 14,975 ಜನರು ಗುಣಮುಖರಾಗಿದ್ದು ಪಾಸಿಟಿವಿಟಿ ದರವು ಶೇ 4.86ಕ್ಕೆ ಇಳಿದಿದೆ. ಪಾಸಿಟಿವಿಟಿ ದರ ಶೇ 5ರ ಒಳಗೆ ಇರಬೇಕು ಎಂಬುದು ರಾಜ್ಯದ ಗುರಿಯಾಗಿತ್ತು.

ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 25,11,105 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 32,644 ಜನರು ಮೃತಪಟ್ಟಿದ್ದಾರೆ. 20,3,769 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1154 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ 4,769 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 48 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,92,886ಕ್ಕೇರಿಕೆಯಾಗಿದೆ. 10,85,862 ಮಂದಿ ಚೇತರಿಸಿಕೊಂಡಿದ್ದಾರೆ. 91760 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,263ಕ್ಕೆ ಏರಿದೆ.

ಇದನ್ನೂ ಓದಿ: ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ ದುಃಖ ತಂದಿದೆ: ಪ್ರಧಾನಿ ಮೋದಿ ಸಂತಾಪ

ಕೊವಿಡ್​ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ನಟಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿ

( Karnataka govt announces Expansion of vehicle tax payment period until June 30)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?