AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ

ರಾಜ್ಯ ಸರ್ಕಾರ ಇಂದು (ಮೇ 22) ಸಿಎಂ ಆಪ್ತ ಕಾರ್ಯದರ್ಶಿ, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕವಾಗಿದೆ. ಯಾರ್ಯಾರು ಎನ್ನುವ ವಿವರ ಇಲ್ಲಿದೆ.

ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on:May 22, 2023 | 2:14 PM

Share

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ(Karnataka Assembly Elections 2023) ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದೆ. ಸಿದ್ದರಾಮಯ್ಯ (Siddaramaiah) ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀರಿಸಿದ್ದಾರೆ. ಇದರ ಬೆನ್ನಲ್ಲೇ ಕೆಲ ಅಧಿಕಾರಿಗಳು ನೇಮಕ, ಸ್ಥಾನಪಲ್ಲಟಗಳು ಸದ್ದಿಲ್ಲದೆ ನಡೆದಿವೆ. ಅದರಂತೆ ಇಂದು (ಮೇ 22) ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ (CM Special Officer), ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ(CM Media Adviser) ನೇಮಕವಾಗಿದೆ. ಯಾರ್ಯರು ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ 

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕಗೊಳಿಸಿ ರಾಜ್ಯಸರ್ಕಾರ ಆದೇಶಿಸಿದೆ. ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನು ಇದೇ ವೇಳೆ ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಹಾಗೂ ಸಿಎಂ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಇನ್ನು ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಹೊಸ ಸರ್ಕಾರ ಆಡಳಿತಕ್ಕೆ ಬಂದರೆ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿತ್ತು.

ಮೊನ್ನೇ ಅಷ್ಟೇ ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿತ್ತು.

Published On - 2:09 pm, Mon, 22 May 23

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!