AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ

ಗ್ಯಾಸ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ, ಆಟೋದವರ ಬದುಕು ಕೂಡಾ ಬೀದಿಗೆ ಬರ್ತಿದೆ. ಗಂಟೆಗಟ್ಟಲ್ಲೇ ಕ್ಯೂ ನಿಂತ್ರೂ ಆಟೋದವರಿಗೆ ಗ್ಯಾಸ್‌ ಸಿಗುತ್ತಿಲ್ಲ. ಹೀಗಿರುವಾಗಿ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜಿನ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. ಆಟೋ ಚಾಲಕರಿಗೆ ಆತಂಕ ಬೇಡ ಎಂದಿದೆ.

ಎಲ್​ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ
ವಿಧಾನ ಸೌಧ, ಎಲ್​ಪಿಜಿImage Credit source: tv9 kannada
ಪ್ರಸನ್ನ ಗಾಂವ್ಕರ್​
| Edited By: |

Updated on:Apr 08, 2026 | 3:23 PM

Share

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಗ್ಯಾಸ್​ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಾಗಿದೆ. ದಿನವಿಡಿ ದುಡಿಮೆ ಬಿಟ್ಟು ಬಂಕ್​ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಟೋ ಚಾಲಕರು ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಆಟೋ ಗ್ಯಾಸ್ (Auto LPG)​​ ಕೊರತೆ ಬಗ್ಗೆ ವಂದತಿಗಳು ಕೂಡ ಹರಿದಾಡಿದ್ದವು. ಸದ್ಯ ಆಟೋ ಎಲ್​ಪಿಜಿ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ,  ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್​ವರೆಗೂ ಪೂರೈಕೆ

ಆಟೋ ಎಲ್​ಪಿಜಿ ಸರಬರಾಜು ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. IOCL, BPC, HPC ಕಂಪನಿಗಳಿಂದ ಗ್ಯಾಸ್​ ಪೂರೈಕೆ ನಡೆಯುತ್ತಿದೆ. ಏಪ್ರಿಲ್ 2ರಿಂದ ಏಪ್ರಿಲ್‌ 6ರವರೆಗೆ ದಿನನಿತ್ಯ ಸರಬರಾಜು ಆಗುತ್ತಿದೆ. ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್​ವರೆಗೂ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಅತಿ ಹೆಚ್ಚು 94.11 MT ಸರಬರಾಜು ಮಾಡಲಾಗಿದೆ. ಆಟೋ ಚಾಲಕರು ಆತಂಕಪಡಬೇಕಾಗಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್! ಡ್ಯುಯಲ್ ಫ್ಯೂಯಲ್ ಬಳಕೆಗೆ ಸಲಹೆ

ಇನ್ನು ಎಲ್​ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಏಪ್ರಿಲ್ 5ರಂದು ಗರಿಷ್ಠ 94.11 MT ಪೂರೈಕೆಯಾಗಿದೆ. ಆಟೋ ಚಾಲಕರಿಗೆ ಆತಂಕ ಬೇಡ, ಪೂರೈಕೆ ಮೇಲೆ ಸರ್ಕಾರದ ನಿಗಾ ಇದೆ.

  • ದಿನಾಂಕ                            ಆಟೋ ಎಲ್​ಪಿಜಿ ಸರಬರಾಜು (ಮೆಟ್ರಿಕ್ ಟನ್​​ನಲ್ಲಿ)
  • ಏಪ್ರಿಲ್​ 2ರಂದು                             87.78
  • ಏಪ್ರಿಲ್​ 3ರಂದು                             86.05
  • ಏಪ್ರಿಲ್​ 4ರಂದು                             84.80
  • ಏಪ್ರಿಲ್​​ 5ರಂದು                             94.11
  • ಏಪ್ರಿಲ್​ 6ರಂದು                             83.58

ಇನ್ನೂ ಓದಿ: ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?

ಸದ್ಯ ರಾಜ್ಯದಲ್ಲಿನ ಆಟೋ ಮಾಲೀಕರು ಮತ್ತು ಚಾಲಕರುಗಳು ಆತಂಕ ಪಡದೇ ಮತ್ತು ಯಾವುದೇ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಕೈಗಾರಿಕಾ ವಲಯಕ್ಕೆ ಎಲ್​ಪಿಜಿ ಹಂಚಿಕೆಗೆ ಮಾರ್ಗಸೂಚಿ 

ಇನ್ನು ಕೈಗಾರಿಕಾ ವಲಯಕ್ಕೆ ಎಲ್​ಪಿಜಿ ಹಂಚಿಕೆ ಕುರಿತು ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಕಾರ್ಯದರ್ಶಿ ಡಾ.ನೀರಜ್ ಮಿತ್ತಲ್​ರಿಂದ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ ರವಾನಿಸಲಾಗಿದೆ.

  • ವಿವಿಧ ಕೈಗಾರಿಕಾ ವಲಯಗಳಿಗೆ ಶೇ.70ರಷ್ಟು LPG ಹಂಚಿಕೆಗೆ ನಿರ್ಧಾರ.
  • ಪಿಎನ್‌ಜಿ ಸುಧಾರಣೆ ತಂದ ರಾಜ್ಯಗಳಿಗೆ ಹೆಚ್ಚುವರಿ ಶೇ.10ರಷ್ಟು ಎಲ್‌ಪಿಜಿ
  • ಫಾರ್ಮಾ, ಫುಡ್, ಅಗ್ರಿಕಲ್ಚರ್ ಸೇರಿ ಪ್ರಮುಖ ವಲಯಗಳಿಗೆ ಅನಿಲ ಪೂರೈಕೆ
  • ಬೃಹತ್ LPG ಬಳಕೆಗೆ ದಿನಕ್ಕೆ 0.2 ಟಿಎಂಟಿ ಮಿತಿ ನಿಗದಿ
  • ನೈಸರ್ಗಿಕ ಅನಿಲ ಬಳಸಲು ಸಾಧ್ಯವಿಲ್ಲದ ಘಟಕಗಳಿಗೆ ಮೊದಲ ಆದ್ಯತೆ
  • ಸಿಜಿಡಿ ಘಟಕಗಳಿಗೆ ಪಿಎನ್‌ಜಿ ನೋಂದಣಿ ಕಡ್ಡಾಯ
  • ಪ್ಯಾಕೇಜಿಂಗ್, ಪೇಂಟ್, ಸ್ಟೀಲ್ ಮತ್ತು ಸೆರಾಮಿಕ್ ಘಟಕಗಳಿಗೆ ಸಿಗಲಿದೆ ನೆರವು
  • ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅನಿಲಪೂರೈಕೆ ವ್ಯವಸ್ಥೆ
  • ಮಾರ್ಚ್​​ 2026ರ ಬಳಕೆ ಆಧರಿಸಿ ಕೈಗಾರಿಕೆಗಳಿಗೆ ಇಂಧನ ಕೋಟಾ ನಿಗದಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:14 pm, Wed, 8 April 26

Follow Us
ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಮುಸ್ಲಿಂ ಮಹಿಳೆ ಮನವಿ
ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಮುಸ್ಲಿಂ ಮಹಿಳೆ ಮನವಿ
ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ
ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ