AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ

ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಳಿಗೆ ಸಾರ್ವತ್ರಿಜ ರಜೆ ನೀಡಲಾಗಿದೆ. ಎಲ್ಲೆಲ್ಲಿ?

ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 26, 2023 | 6:13 PM

Share

ಬೆಂಗಳೂರು, (ಡಿಸೆಂಬರ್ 26): ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು 19 ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ (Local body Election) ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್, ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ಮತ್ತು ಕಲಬುರಗಿ ಜಿಲ್ಲೆಯ ವಾಡಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರ ಜೊತೆಗೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 36 ವಾರ್ಡ್ ಗಳಿಗೆ ಉಪಚುನಾವಣೆ ನಡೆಯಲಿದೆ.

ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆ ‌ನಡೆಯುವ ಆಯಾ ಕ್ಷೇತ್ರಗಳ ವ್ಯಾಪ್ತಿಯ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಉದ್ದಿಮೆಗಳು, ವ್ಯಾವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇತರ ಸಂಸ್ಥೆಗಳಲ್ಲಿನ ಖಾಯಂ ಅಥವಾ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ನೀಡಲಾಗಿದೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ