AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Employees Strike: ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್: ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ

ಸರ್ಕಾರಿ ನೌಕರರ ಮುಷ್ಕರ: 7ನೇ ವೇತನ ಆಯೋಗ ವರದಿ ಜಾರಿ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಪಟ್ಟು ಹಿದಿದ್ದು, ಇದೀಗ ನಾಳೆಯಿಂದ ಮುಷ್ಕರಕ್ಕೆ ನಡೆಸಲು ಮುಂದಾಗಿದೆ ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.

Govt Employees Strike: ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್: ರಾಜ್ಯ ಸರ್ಕಾರಿ ನೌಕರರ ಸಂಘ ಅಧಿಕೃತ ಘೋಷಣೆ
ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
TV9 Web
| Updated By: Digi Tech Desk|

Updated on:Feb 28, 2023 | 3:11 PM

Share

ಬೆಂಗಳೂರು: 7ನೇ ವೇತನ ಆಯೋಗ (7th Pay Commission) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು(Karnataka Govt employees) ನಾಳೆ ಅಂದ್ರೆ ಮಾರ್ಚ್​ 01ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದ ಸರ್ಕಾರಿ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಇನ್ನು ಈ ಬಗ್ಗೆ ಇಂದು(ಫೆ.28) ಸುದ್ದಿಗೊಷ್ಠಿಯಲ್ಲಿ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ(CS Shadakshari), ಬಜೆಟ್​ನಲ್ಲಿ 7ನೇ ವೇತನ ಆಯೋಗ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಾಳೆಯಿಂದ(ಮಾ.01) ಸಾಮೂಹಿಕವಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಲಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ಸೇವೆಗಳು ಏಕಕಾಲದಲ್ಲಿ ಬಂದ್ ಆಗುತ್ತವೆ. ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ. ಯಾವುದೇ ಸಂಧಾನಕ್ಕೆ ನಾವು ಬಗ್ಗುವುದಿಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಾರ್ಚ್​ 1ರಿಂದ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ, ಯಾವೆಲ್ಲಾ ಸೇವೆಗಳಲ್ಲಿ ವ್ಯತ್ಯಯ? ಇಲ್ಲಿದೆ ಪಟ್ಟಿ

ಕಳೆದ 1 ವರ್ಷದ ಸಿಎಂ ವೇತನ ಪರಿಷ್ಕರಣೆ ಭರವಸೆ ನೀಡಿದ್ದರು. ಆದರೆ ಈ ತನಕ ಸಿಎಂ ಭರವಸೆ ಈಡೇರಿಲ್ಲ. ವೇತನ‌ ಆಯೋಗ ಪರಿಶೀಲನೆ ಭರವಸೆ ನೀಡಿದೆ. ಆದರೆ ಎಲ್ಲವೂ ಚರ್ಚೆ ಹಂತದಲ್ಲಿ ಇದೆ. ನಾವು ಸರ್ಕಾರಕ್ಕೆ ಪ್ರತಿಭಟನೆ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೂ ಸರ್ಕಾರ ನಮ್ಮ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರು ಒಗಟ್ಟಾಗಿ ಅನಿರ್ಧಿಷ್ಟ ಅವಧಿ ಹೋರಾಟ ಮಾಡಬೇಕು. ಎಲ್ಲ ವೃಂದ ಸಂಘಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಾಮೂಹಿಕ ನಾಯಕತ್ವದಲ್ಲಿ ಇದನ್ನು ಮಾಡುತ್ತಿದ್ದೇವೆ. ನಾಳೆಯಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಯಾವುದೇ ಗೊಂದಲ ಇಲ್ಲದೆ ಅನಿರ್ಧಾವಧಿ ಗೈರಾಗ್ತಿದ್ದೇವೆ. ಮೊದಲು ಸ್ವಲ್ಪ ಗೊಂದಲ ಇತ್ತು ಆದ್ರೆ, ಈಗ ಎಲ್ಲಾ ಸಂಘಗಳಿಂದ ಈ ಹೋರಾಟ ಮಾಡುತ್ತಿದ್ದೇವೆ. ಬಸವರಾಜ ಬೊಮ್ಮಾಯಿಯವರು ಏನು ಘೋಷಣೆ ಮಾಡಲಿಲ್ಲ. 2022 ರಲ್ಲಿ ವೇತನ ಆಯೋಗ ರಚನೆ ಮಾಡ್ಬೇಕು ಅಂತ ಹೇಳುತ್ತಾರೆ. ಅದಾದ ಮೇಲೆ ವೇತನ ಆಯೋಗ ರಚನೆಯಾಗಲಿಲ್ಲ. 9 ತಿಂಗಳ ಬಳಿಕ ಆಯೋಗ ರಚನೆಯಾಗಿದೆ. ಆದ್ರೆ ಮಧ್ಯಂತರ ವರದಿ ತೆಗೆದುಕೊಂಡು ನಮಗೆ ವೇತನ ಇಂಪ್ಲಿಮೆಂಟ್ ಮಾಡಿ ಅಂತ ವಿನಂತಿ ಮಾಡಿದ್ವಿ. ಆಗಲೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ರು. ಆಗಲಿನಿಂದಲೂ ಬರೀ ಚರ್ಚೆಯಲ್ಲಿದೆ. ಬದಲಿಗೆ ಏನು ನಿರ್ಣಯಕ್ಕೆ ಬಂದಿಲ್ಲ. ಇಡೀ ದೇಶದಲ್ಲಿ ಕಡಿಮೆ ಕನಿಷ್ಟ ವೇತನ ಪಡೆಯುವವರು ಕರ್ನಾಟಕ ರಾಜ್ಯದವರು. ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಾಗಿದೆ. ಇಂದು 39% ಹುದ್ದೆ ಖಾಲಿ ಇದೆ. ಇಷ್ಟೆಲ್ಲ ಕೆಲಸ ಮಾಡಿ ಅಭಿವೃದ್ಧಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

ಇನ್ನು ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಉಪಾಧ್ಯಕ್ಷ ರುದ್ರಪ್ಪ, ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಭಾಗಿಯಾಗಿದ್ರು.

Published On - 12:07 pm, Tue, 28 February 23