AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಎ ಹೂಡಿಕೆದಾರರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್: ಕಂಪನಿ ಆಸ್ತಿ ಹರಾಜು, ರಂಜಾನ್ ಹಬ್ಬದೊಳಗೆ ಹಣ ವಾಪಸ್

ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ಸರ್ಕಾರ ಗುಡ್​ನ್ಯೂಸ್ ನೀಡಿದೆ. ಹಣ ಕಳೆದುಕೊಂಡ ಎಲ್ಲರಿಗೂ ರಂಜಾನ್ ಹಬ್ಬದ ಒಳಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದ್ದಾರೆ. ಹಗರಣ ಸಂಬಂಧ ವಿಕಾಸ ಸೌಧದಲ್ಲಿ ನಡೆದ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.

ಐಎಂಎ ಹೂಡಿಕೆದಾರರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್: ಕಂಪನಿ ಆಸ್ತಿ ಹರಾಜು, ರಂಜಾನ್ ಹಬ್ಬದೊಳಗೆ ಹಣ ವಾಪಸ್
ಐಎಂಎ
Shivaprasad B
| Edited By: |

Updated on: Feb 25, 2025 | 7:02 AM

Share

ಬೆಂಗಳೂರು, ಫೆಬ್ರವರಿ 25: ಕಂದಾಯ ಸಚಿವ ಕೃಷ್ಣಬೈರೇಗೌಡ, ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೆ ಶುಭ ಸುದ್ದಿ ನೀಡಿದ್ದಾರೆ. ಹಣ ಕಳೆದುಕೊಂಡ ಎಲ್ಲರಿಗೂ ರಂಜಾನ್ ಹಬ್ಬದ ಒಳಗಾಗಿ ಪರಿಹಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ಐಎಂಎ ಹಗರಣ ಸಂಬಂಧ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಯಿತು. ಬಳಿಕ ಸಚಿವರು ಪರಿಹಾರ ಕೊಡುವುದರ ಬಗ್ಗೆ ಮಾಹಿತಿ ನೀಡಿದರು.

ಸಚಿವ ಜಮೀರ್ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಭೆಯಲ್ಲಿ ಭಾಗಿಯಾಗಿದ್ದರು. ಐಎಂಎದಲ್ಲಿ ಎಷ್ಟು ಮೊತ್ತದ ಹಗರಣ ನಡೆದಿದೆ, ಈವರೆಗೆ ಎಷ್ಟು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ, 7 ವರ್ಷದಲ್ಲಿ ಎಷ್ಟು ಜನರಿಗೆ ಹಣ ಹಿಂತಿರುಗಿಸಲಾಗಿದೆ ಎಂಬ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಪರಿಹಾರದ ಬಗ್ಗೆ ಸಚಿವರು ಹೇಳಿದ್ದಿಷ್ಟು…

ಐಎಂಎನಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋದವರಿಗೆ, ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ಕೊಡಲಾಗುವುದು. ಫಲಾನುಭವಿಗಳು ಮೃತಪಟ್ಟಿದ್ದರೆ ಅವರ ನಾಮಿನಿಗೆ ಪರಿಹಾರ ನೀಡಲಾಗುವುದು. ರಂಜಾನ್ ಹಬ್ಬಕ್ಕೂ 10 ದಿನ ಮೊದಲೇ ಪರಿಹಾರ ಸಿಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನಿದು ಐಎಂಎ ಹಗರಣ?

ಹಣ ಡಬ್ಲಿಂಗ್ ಆಸೆಯಿಂದಾಗಿ ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರು 3,213.58 ಕೋಟಿ ರೂಪಾಯಿಗಳಷ್ಟು ಹಣವನ್ನು ಐಎಂಎ ಕಂಪನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದರು. ಸದ್ಯ 69 ಸಾವಿರ ಠೇವಣಿದಾರರಿಗೆ ಹಣ ವಾಪಸ್ ನೀಡಬೇಕಿದೆ. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರ ಐಎಂಎ ಕಂಪನಿಗೆ ಸಂಬಂಧಿಸಿದ 106.92 ಕೋಟಿ ಮೌಲ್ಯದ ಚರಾಸ್ತಿ, 401.92 ಕೋಟಿ ಮೌಲ್ಯ ಸ್ಥಿರಾಸ್ತಿ ವಶಕ್ಕೆ ಪಡೆದುಕೊಂಡಿತ್ತು.ಅಲ್ಲದೆ ಕಂಪನಿಯ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂಪಾಯಿ ನಗದು ಸೇರಿದಂತೆ 534.5 ಕೋಟಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಕೋರ್ಟ್​ನ ಆದೇಶದಂತೆ ಐಎಂಎ ಆಸ್ತಿಗಳನ್ನು ಹರಾಜು ಹಾಕಿ ಈಗ ಸರ್ಕಾರ ಫಲಾನುಭವಿಗಳಿಗೆ ಹಣ ಹಿಂತಿರುಗಿಸಲು ಮುಂದಾಗಿದೆ.

ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ ಆರೋಪ: ಸ್ಪಷ್ಟನೆ ನೀಡಿದ ಬೆಸ್ಕಾಂ ಎಂಡಿ

ಸರ್ಕಾರದ ಈ ನಿರ್ಧಾರದಿಂದ, ಲಕ್ಷ ಲಕ್ಷ ರೂಪಾಯಿ ಹಣ ಕಳೆದುಕೊಂಡು ಕಳೆದ 7 ವರ್ಷಗಳಿಂದ ಪರಿಹಾರದ ಹಣಕ್ಕಾಗಿ ಎದುರು ನೋಡುತ್ತಿದ್ದವರಿಗೆ ಹಲವು ವರ್ಷಗಳ ಬಳಿಕ ನ್ಯಾಯ ಸಿಗಲಿದೆ. ಆದರೆ, ಇದರಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ