AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

Corona Guidelines: ರಾಜ್ಯದ ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 05, 2022 | 1:16 PM

Share

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಸಹಿತ ಚಂಡೀಗಡ, ರಾಜಸ್ಥಾನಗಳಲ್ಲಿ ಕೊವಿಡ್-19 ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ನಿಯಮಾವಳಿಗಳು ಏನೇನು? ಶಿಕ್ಷೆ ಏನು? – ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಅವಶ್ಯವಾಗಿದೆ. ತಪ್ಪಿದಲ್ಲಿ ಬಿಬಿಎಂಪಿ ಪ್ರದೇಶದಲ್ಲಿ ₹ 250, ಉಳಿದ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ₹ 250 ಮತ್ತು ಇತರ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ₹ 100 ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. – ಜನರೆಲ್ಲರೂ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳುವುದು ಆಯಾ ಸ್ಥಳಗಳ ಮಾಲೀಕರ ಕರ್ತವ್ಯವಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಜನರಿಗೆ ಅನುಮತಿ? – ಮದುವೆ ಕಾರ್ಯಕ್ರಮಕ್ಕೆ ತೆರೆದ ಪ್ರದೇಶವಾದರೆ 500 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 200 ಜನ ಸೇರಲು ಅನುಮತಿ ನೀಡಲಾಗಿದೆ. – ಬರ್ತ್​ಡೇ ಹಾಗೂ ಇತರ ಸಮಾರಂಭಗಳಿಗೆ ತೆರೆದ ಸಭಾಂಗಣದಲ್ಲಿ 100 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 50 ಜನರು ಸೇರಬಹುದು. – ಮರಣೋತ್ತರ ಕಾರ್ಯಕ್ರಮಗಳಿಗೆ ತೆರೆದ ಪ್ರದೇಶದಲ್ಲಿ 100 ಹಾಗೂ ಮುಚ್ಚಿದ ಸಭಾಂಗಣದಲ್ಲಿ 50 ಜನ ಸೇರಬಹುದಾಗಿದೆ. – ಶವ ಸಂಸ್ಕಾರ ನಡೆಯುವಲ್ಲಿ 50 ಜನ ಭಾಗವಹಿಸಲು ಅವಕಾಶವಿದೆ. – ಉಳಿದ ಸಮಾರಂಭಗಳಲ್ಲಿ ಕೇವಲ 100 ಜನ ಸೇರಬಹುದಾಗಿದೆ. – ತೆರೆದ ಪ್ರದೇಶದಲ್ಲಿ ನಡೆಯುವ ಧಾರ್ಮಿಕ ಸಮಾರಂಭಗಳಲ್ಲಿ 500 ಜನ ಭಾಗವಹಿಸಬಹುದು. – ರಾಜಕೀಯ ಸಮಾರಂಭ, ಸಮಾವೇಶಗಳಲ್ಲಿ ಕೂಡ ತೆರೆದ ಪ್ರದೇಶದಲ್ಲಾದರೆ 500 ಜನ ಸೇರಬಹುದಾಗಿದೆ. – ಈ ನಿಯಮಾವಳಿಗಳ ಅನುಷ್ಠಾನಕ್ಕೆ ಆಯೋಜಕರು ಅಥವಾ ಸಂಬಂಧಪಟ್ಟ ಸ್ಥಳದ ಮಾಲೀಕರು ಹೊಣೆಗಾರರಾಗಿರುತ್ತಾರೆ. – ತಪ್ಪಿದರೆ 5,000 ಅಥವಾ 10,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

ಇದನ್ನೂ ಓದಿ: COVID-19 MHA Guidelines: ಕೊರೊನಾ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Published On - 4:26 pm, Wed, 24 March 21

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ