ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

Corona Guidelines: ರಾಜ್ಯದ ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on:Apr 05, 2022 | 1:16 PM

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಸಹಿತ ಚಂಡೀಗಡ, ರಾಜಸ್ಥಾನಗಳಲ್ಲಿ ಕೊವಿಡ್-19 ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ನಿಯಮಾವಳಿಗಳು ಏನೇನು? ಶಿಕ್ಷೆ ಏನು? – ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಅವಶ್ಯವಾಗಿದೆ. ತಪ್ಪಿದಲ್ಲಿ ಬಿಬಿಎಂಪಿ ಪ್ರದೇಶದಲ್ಲಿ ₹ 250, ಉಳಿದ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ₹ 250 ಮತ್ತು ಇತರ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ₹ 100 ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. – ಜನರೆಲ್ಲರೂ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳುವುದು ಆಯಾ ಸ್ಥಳಗಳ ಮಾಲೀಕರ ಕರ್ತವ್ಯವಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಜನರಿಗೆ ಅನುಮತಿ? – ಮದುವೆ ಕಾರ್ಯಕ್ರಮಕ್ಕೆ ತೆರೆದ ಪ್ರದೇಶವಾದರೆ 500 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 200 ಜನ ಸೇರಲು ಅನುಮತಿ ನೀಡಲಾಗಿದೆ. – ಬರ್ತ್​ಡೇ ಹಾಗೂ ಇತರ ಸಮಾರಂಭಗಳಿಗೆ ತೆರೆದ ಸಭಾಂಗಣದಲ್ಲಿ 100 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 50 ಜನರು ಸೇರಬಹುದು. – ಮರಣೋತ್ತರ ಕಾರ್ಯಕ್ರಮಗಳಿಗೆ ತೆರೆದ ಪ್ರದೇಶದಲ್ಲಿ 100 ಹಾಗೂ ಮುಚ್ಚಿದ ಸಭಾಂಗಣದಲ್ಲಿ 50 ಜನ ಸೇರಬಹುದಾಗಿದೆ. – ಶವ ಸಂಸ್ಕಾರ ನಡೆಯುವಲ್ಲಿ 50 ಜನ ಭಾಗವಹಿಸಲು ಅವಕಾಶವಿದೆ. – ಉಳಿದ ಸಮಾರಂಭಗಳಲ್ಲಿ ಕೇವಲ 100 ಜನ ಸೇರಬಹುದಾಗಿದೆ. – ತೆರೆದ ಪ್ರದೇಶದಲ್ಲಿ ನಡೆಯುವ ಧಾರ್ಮಿಕ ಸಮಾರಂಭಗಳಲ್ಲಿ 500 ಜನ ಭಾಗವಹಿಸಬಹುದು. – ರಾಜಕೀಯ ಸಮಾರಂಭ, ಸಮಾವೇಶಗಳಲ್ಲಿ ಕೂಡ ತೆರೆದ ಪ್ರದೇಶದಲ್ಲಾದರೆ 500 ಜನ ಸೇರಬಹುದಾಗಿದೆ. – ಈ ನಿಯಮಾವಳಿಗಳ ಅನುಷ್ಠಾನಕ್ಕೆ ಆಯೋಜಕರು ಅಥವಾ ಸಂಬಂಧಪಟ್ಟ ಸ್ಥಳದ ಮಾಲೀಕರು ಹೊಣೆಗಾರರಾಗಿರುತ್ತಾರೆ. – ತಪ್ಪಿದರೆ 5,000 ಅಥವಾ 10,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

ಇದನ್ನೂ ಓದಿ: COVID-19 MHA Guidelines: ಕೊರೊನಾ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Published On - 4:26 pm, Wed, 24 March 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ