AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

Corona Guidelines: ರಾಜ್ಯದ ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 05, 2022 | 1:16 PM

Share

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಸಹಿತ ಚಂಡೀಗಡ, ರಾಜಸ್ಥಾನಗಳಲ್ಲಿ ಕೊವಿಡ್-19 ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದ ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಇಂದು (ಮಾರ್ಚ್ 24) ಹೊಸ ನಿಯಮಾವಳಿಗಳ ಅಧಿಸೂಚನೆ ಹೊರಡಿಸಿದೆ.

ನಿಯಮಾವಳಿಗಳು ಏನೇನು? ಶಿಕ್ಷೆ ಏನು? – ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಅವಶ್ಯವಾಗಿದೆ. ತಪ್ಪಿದಲ್ಲಿ ಬಿಬಿಎಂಪಿ ಪ್ರದೇಶದಲ್ಲಿ ₹ 250, ಉಳಿದ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ₹ 250 ಮತ್ತು ಇತರ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ₹ 100 ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. – ಜನರೆಲ್ಲರೂ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳುವುದು ಆಯಾ ಸ್ಥಳಗಳ ಮಾಲೀಕರ ಕರ್ತವ್ಯವಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಜನರಿಗೆ ಅನುಮತಿ? – ಮದುವೆ ಕಾರ್ಯಕ್ರಮಕ್ಕೆ ತೆರೆದ ಪ್ರದೇಶವಾದರೆ 500 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 200 ಜನ ಸೇರಲು ಅನುಮತಿ ನೀಡಲಾಗಿದೆ. – ಬರ್ತ್​ಡೇ ಹಾಗೂ ಇತರ ಸಮಾರಂಭಗಳಿಗೆ ತೆರೆದ ಸಭಾಂಗಣದಲ್ಲಿ 100 ಜನ ಸೇರಬಹುದು. ಕ್ಲೋಸ್​ಡ್ ಹಾಲ್ ಅಂತಾದರೆ ಕೇವಲ 50 ಜನರು ಸೇರಬಹುದು. – ಮರಣೋತ್ತರ ಕಾರ್ಯಕ್ರಮಗಳಿಗೆ ತೆರೆದ ಪ್ರದೇಶದಲ್ಲಿ 100 ಹಾಗೂ ಮುಚ್ಚಿದ ಸಭಾಂಗಣದಲ್ಲಿ 50 ಜನ ಸೇರಬಹುದಾಗಿದೆ. – ಶವ ಸಂಸ್ಕಾರ ನಡೆಯುವಲ್ಲಿ 50 ಜನ ಭಾಗವಹಿಸಲು ಅವಕಾಶವಿದೆ. – ಉಳಿದ ಸಮಾರಂಭಗಳಲ್ಲಿ ಕೇವಲ 100 ಜನ ಸೇರಬಹುದಾಗಿದೆ. – ತೆರೆದ ಪ್ರದೇಶದಲ್ಲಿ ನಡೆಯುವ ಧಾರ್ಮಿಕ ಸಮಾರಂಭಗಳಲ್ಲಿ 500 ಜನ ಭಾಗವಹಿಸಬಹುದು. – ರಾಜಕೀಯ ಸಮಾರಂಭ, ಸಮಾವೇಶಗಳಲ್ಲಿ ಕೂಡ ತೆರೆದ ಪ್ರದೇಶದಲ್ಲಾದರೆ 500 ಜನ ಸೇರಬಹುದಾಗಿದೆ. – ಈ ನಿಯಮಾವಳಿಗಳ ಅನುಷ್ಠಾನಕ್ಕೆ ಆಯೋಜಕರು ಅಥವಾ ಸಂಬಂಧಪಟ್ಟ ಸ್ಥಳದ ಮಾಲೀಕರು ಹೊಣೆಗಾರರಾಗಿರುತ್ತಾರೆ. – ತಪ್ಪಿದರೆ 5,000 ಅಥವಾ 10,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

ಇದನ್ನೂ ಓದಿ: COVID-19 MHA Guidelines: ಕೊರೊನಾ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Published On - 4:26 pm, Wed, 24 March 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!