AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Govt Jobs: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು 21 ಸ್ಟೆನೋಗ್ರಾಫರ್ ಗ್ರೇಡ್-3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. PUC/ಡಿಪ್ಲೊಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700 ರೂ. ವೇತನ ಸಿಗಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ಸೆಪ್ಟೆಂಬರ್ 15 ಕೊನೆಯ ದಿನಾಂಕ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ, ಈ ಉತ್ತಮ ಸರ್ಕಾರಿ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು.

Karnataka Govt Jobs: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on:Aug 21, 2026 | 2:28 PM

Share

ಕರ್ನಾಟಕ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ 21 ಸ್ಟೆನೋಗ್ರಾಫರ್ ಗ್ರೇಡ್-3 (Stenographer Grade-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 21 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700ರೂ. ಶ್ರೇಣಿಯಲ್ಲಿ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ, ಪಿಯುಸಿ (PUC) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ ಮತ್ತು ಅರ್ಜಿ ಶುಲ್ಕ:

ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಪ್ರವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST ಮತ್ತು Cat-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200ರೂ. ಮತ್ತು OBC ಅಭ್ಯರ್ಥಿಗಳಿಗೆ 100ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 17ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಕೊನೆಯ ದಿನದವರೆಗೂ ಕಾಯದೆ ಅರ್ಹ ಉದ್ಯೋಗಾಕಾಂಕ್ಷಿಗಳು ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​​ಸೈಟ್​​​​ ಗೆ bengalururural.dcourts.gov.in ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:27 pm, Fri, 21 August 26

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!