AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ

ಮಠದ ವ್ಯಾಪ್ತಿಯಲ್ಲಿ ನಾನಾ ಹಂತಗಳಲ್ಲಿ ಕಾಮಗಾರಿಗಳು ನಡೆಯುತ್ತಿದೆ. ಆದರೆ, ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು.

ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ
ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯಕ್ಕೆ ಭೇಟಿ ನೀಡಿದರು
TV9 Web
| Updated By: ganapathi bhat|

Updated on:Apr 06, 2022 | 7:11 PM

Share

ಮಂತ್ರಾಲಯ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಕರ್ನಾಟಕ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಇಂದು (ಮಾರ್ಚ್ 13) ತಿಳಿಸಿದರು. ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ , ದರ್ಶನ ಪಡೆದ ಸಂದರ್ಭದಲ್ಲಿ ಮಠದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಮಯದಲ್ಲಿ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಸ್ವಾಮೀಜಿ ಸಚಿವ ಅರವಿಂದ ಲಿಂಬಾವಳಿಗೆ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿ ಸಮಿತಿ ಸದಸ್ಯರಾಗಿ 2009ರಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶ್ರೀಮಠದ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ. ಹಾಗಾಗಿ ಲಿಂಬಾವಳಿ ಇಂದು ಮಂತ್ರಾಲಯದ ಅಭಿವೃದ್ಧಿ ಕಾರ್ಯಗಳ ಪರಿವೀಕ್ಷಣೆ ನಡೆಸಿದರು.

ARAVINDA LIMBAVALI VISITS MANTRALAYAM

ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯಕ್ಕೆ ಭೇಟಿ ನೀಡಿದರು

ಮಠದ ವ್ಯಾಪ್ತಿಯಲ್ಲಿ ನಾನಾ ಹಂತಗಳಲ್ಲಿ ಕಾಮಗಾರಿಗಳು ನಡೆಯುತ್ತಿದೆ. ಆದರೆ, ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ತಾವು ಈ ಬಗ್ಗೆ ಕೂಡಲೇ ಕ್ರಮ ವಹಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ನಾಡಿದ್ದು ಮಂತ್ರಾಲಯದಲ್ಲಿ ಉದ್ಘಾಟನೆ ಆಗಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದು ಅಲ್ಲಿನ ಕಾಮಗಾರಿಗಳ ಪರಿಶೀಲನೆ ಸಹ ನಡೆಸಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದರು.

ಇದನ್ನೂ ಓದಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

Published On - 6:31 pm, Sat, 13 March 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ