AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ

BPL ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವನ್ನು ಇಟ್ಟುಕೊಂಡು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
BPL ಕುಟುಂಬ ಆರೋಗ್ಯ ವಿಮೆಗಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಕರ್ನಾಟಕ ಸರ್ಕಾರ ಚಿಂತನೆ
TV9 Web
| Edited By: Rakesh Nayak Manchi|

Updated on: Dec 09, 2023 | 10:40 PM

Share

ಬೆಂಗಳೂರು, ಡಿ.9: ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Govt) ಚಿಂತನೆ ನಡೆಸಿದೆ. 1.8 ಕೋಟಿ ಬಡತನ ರೇಖೆಗಿಂತ ಕೆಳಗಿರುವ (BPL) ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಹಣ ಕ್ರೂಢೀಕರಿಸುವ ಉದ್ದೇಶವಾಗಿದೆ.

1.8 ಕೋಟಿ ಬಿಪಿಎಲ್ ಕಾರ್ಡುದಾರರನ್ನು ಒಳಗೊಳ್ಳುವ ಈ ಯೋಜನೆಯು ಪ್ರತಿ ವ್ಯಕ್ತಿಗೆ ಆರೋಗ್ಯ ಮತ್ತು ಅಪಘಾತದ ಕವರೇಜ್‌ನಲ್ಲಿ ಅಂದಾಜು 25 ಲಕ್ಷ ರೂ. ಒದಗಿಸುತ್ತದೆ. ಇದು ಗ್ರಾಹಕರ ಮೇಲೆ ಕನಿಷ್ಠ ಪರಿಣಾಮ ಬೀರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ವಾರದಲ್ಲಿ 70 ಗಂಟೆ ಕೆಲಸ ಹೇಳಿಕೆಗೆ ಬದ್ಧ, 40 ವರ್ಷ ನಾನೂ ಮಾಡಿದ್ದೇನೆ: ನಾರಾಯಣ ಮೂರ್ತಿ

ಕೇವಲ 50 ಪೈಸೆಯಿಂದ 1 ರೂಪಾಯಿಗೆ ಏರಿಕೆಯಾಗುವುದರಿಂದ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅಪಘಾತ ಮತ್ತು ಆರೋಗ್ಯ ರಕ್ಷಣೆಯಲ್ಲಿ 25 ಲಕ್ಷ ರೂ. ಕವರೇಜ್ ಅನ್ನು ಮರಳಿ ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಪ್ರಾಥಮಿಕ ಇಲಾಖೆಯ ಅಂಕಿಅಂಶಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಪ್ರಸ್ತಾವಿತ ಸೆಸ್, ಆರೋಗ್ಯ ಯೋಜನೆಯ ಅನುಷ್ಠಾನಕ್ಕೆ ಅನುಕೂಲವಾಗಲು ಪ್ರತಿ ವರ್ಷ 1,200 ಕೋಟಿಯಿಂದ 1,500 ಕೋಟಿ ರೂಪಾಯಿಗಳನ್ನು ಕ್ರೂಢೀಕರಿಸುವ ನಿರೀಕ್ಷೆ ಹೊಂದಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ