AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown Guidelines: ಕೊರೊನಾ ಸೋಂಕು ಇಳಿಕೆಯತ್ತ ಮುಖ ಮಾಡಿರುವಾಗಲೇ ಲಾಕ್​ಡೌನ್ ನಿಯಮ ಸಡಿಲಿಸಿದ ಕರ್ನಾಟಕ ಸರ್ಕಾರ

ವಕೀಲರ ಕಚೇರಿಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಲಭ್ಯವಾಗಿದೆ. ಹಾಗೂ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಕೂಡ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಮೂಲಕ ಹೋಮ್ ಡೆಲಿವರಿ ಸಾಧ್ಯವಾಗಿದೆ.

Lockdown Guidelines: ಕೊರೊನಾ ಸೋಂಕು ಇಳಿಕೆಯತ್ತ ಮುಖ ಮಾಡಿರುವಾಗಲೇ ಲಾಕ್​ಡೌನ್ ನಿಯಮ ಸಡಿಲಿಸಿದ ಕರ್ನಾಟಕ ಸರ್ಕಾರ
ಲಾಕ್​ಡೌನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 21, 2021 | 9:47 AM

Share

ಬೆಂಗಳೂರು: ಕೊರೊನಾ ಸೋಂಕು ಕೊಂಚ ಇಳಿಕೆಯತ್ತ ಮುಖಮಾಡಿರುವ ಹೊತ್ತಲ್ಲಿ ಲಾಕ್‌ಡೌನ್ ನಿಯಮ ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋರ್ಟ್ ಕಾರ್ಯನಿರ್ವಹಣೆ ದಿನಗಳಲ್ಲಿ ವಕೀಲರು, ಪ್ಯಾರಾ ಲೀಗಲ್‌ ಸಿಬ್ಬಂದಿ‌ ಸಂಚಾರಕ್ಕೆ ಅವಕಾಶ ನೀಡಿದೆ. ಐಡಿ ಕಾರ್ಡ್ ತೋರಿಸಿ ಓಡಾಡುವುದಕ್ಕೆ ಅವಕಾಶ ನೀಡಲಾಗಿದೆ.

ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕೋರ್ಟ್ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ. ಈ ಮೂಲಕ, ವಕೀಲರ ಕಚೇರಿಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಲಭ್ಯವಾಗಿದೆ. ಹಾಗೂ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಕೂಡ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಮೂಲಕ ಹೋಮ್ ಡೆಲಿವರಿ ಸಾಧ್ಯವಾಗಿದೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರ ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಿತ್ತು. ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಅದರಂತೆ, ಮೃತರ ಅಸ್ಥಿ ವಿಸರ್ಜನೆಗೆ ತೆರಳಲು ಅವಕಾಶ ನೀಡಲಾಗಿತ್ತು. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿತ್ತು.

ಆಯಾ ಧಾರ್ಮಿಕ ವಿಧಾನದಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶವಿದೆ. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ಕೆ ಅಡ್ಡಿಪಡಿಸದಂತೆ ಬಿಬಿಎಂಪಿ ಆಯುಕ್ತರು, ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಎಸ್​ಪಿಗಳಿಗೆ ಸರ್ಕಾರ ಸೂಚನೆ ನೀಡಿತ್ತು.

ಮತ್ತೊಂದೆಡೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜೂನ್​ 7ರ ತನಕ ಹೇರಲಾಗಿರುವ ಲಾಕ್​ಡೌನ್​ ಇನ್ನಷ್ಟು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,000 ಹಾಗೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಇಳಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್ ಮಾಡದಿರುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಲಾಕ್​ಡೌನ್​ಗೆ ಜನರ ಸ್ಪಂದನೆ ಇರುವುದರಿಂದ ಜೂನ್​ ಮಧ್ಯದ ತನಕವೂ ಲಾಕ್​ಡೌನ್ ವಿಸ್ತರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 5ರಂದು ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದು, ಆ ಸಭೆಯಲ್ಲಿ ಅಧಿಕೃತ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಕೊರೊನಾ ಚೈನ್ ಲಿಂಕ್ ಕತ್ತರಿಸಲು ಅಧಿಕಾರಿಗಳು ಮತ್ತಷ್ಟು ದಿನದ ಕಾಲಾವಕಾಶ ಕೇಳಿದ್ದು, ಸದ್ಯಕ್ಕೆ ಯಥಾಸ್ಥಿತಿ ಮುಂದುವರೆಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾಧ್ಯವಾದಷ್ಟು ಲಾಕ್​ಡೌನ್ ಈಗಲೇ ಮಾಡುವುದು ಉತ್ತಮ ಎಂದಿರುವ ತಜ್ಞರು. ಅನ್​ಲಾಕ್​ ಮಾಡಿ ಮತ್ತೆ ಸೋಂಕು ಹೆಚ್ಚಾದರೆ ತೊಂದರೆಯಾಗುತ್ತದೆ. ಹೀಗಾಗಿ, ಲಾಕ್​ಡೌನ್ ವಿಸ್ತರಿಸಿ ಲಸಿಕೆ ಪ್ರಮಾಣ ಹೆಚ್ಚಿಸಬೇಕು. ಶೇ.60 ರಷ್ಟು ಜನರಿಗೆ ಲಸಿಕೆ ತಲುಪಿಸಲು ತುರ್ತಾಗಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿತ್ತು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ನನ್ನ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ

Published On - 6:21 pm, Wed, 26 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು