AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

HSRP Number Plate Deadline: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (HSRP) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ.

ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
HSRP ನಂಬರ್ ಪ್ಲೇಟ್
Kiran Surya
| Edited By: |

Updated on:Dec 01, 2024 | 4:11 PM

Share

ಬೆಂಗಳೂರು, (ಡಿಸೆಂಬರ್ 01): ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್​ಪಿ​ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ (ಡಿಸೆಂಬರ್ 31) ದಿನದ ವರೆಗೆ ಗಡುವು ನೀಡಿದೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ. ಹೀಗಾಗಿ 01-04-2019 ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಈ ಮೂಲಕ ಐದನೇ ಬಾರಿಗೆ ಗಡವು ವಿಸ್ತರಿಸಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?

  • https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. ಇಲ್ಲಿ Book HSRP ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.
  • ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.
  • ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ
  • HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ
  • ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ
  • HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:58 pm, Sun, 1 December 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!