AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣ ಸಿಐಡಿ ತನಿಖೆ: ರಮೇಶ್ ಜಾರಕಿಹೊಳಿಗೆ ಸಂಕಷ್ಟ

ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣ ಸಿಐಡಿ ತನಿಖೆ: ರಮೇಶ್ ಜಾರಕಿಹೊಳಿಗೆ ಸಂಕಷ್ಟ
ರಮೇಶ್ ಜಾರಕಿಹೊಳಿ
TV9 Web
| Edited By: |

Updated on:Jan 19, 2024 | 5:10 PM

Share

ಬೆಂಗಳೂರು, (ಜನವರಿ 19): ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್ ಬ್ಯಾಂಕ್​ನಿಂದ ಕೋಟ್ಯಾಂತರ ರೂಪಾಯಿ ಸಾಲ ಪಡೆದು ಮರುಪಾವತಿಸದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ. ಇದೀಗ ರಾಜ್ಯ ಸರ್ಕಾರ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.

ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳು ತಾವು ಪಡೆದ ಸಾಲವನ್ನು ಬ್ಯಾಂಕ್​ಗೆ ಮರುಪಾವತಿ ಮಾಡುವುದರಿಂದ ತಪ್ಪಿಸಿಕೊಂಡು ಬ್ಯಾಂಕ್​ಗೆ ಮೋಸ ಮಾಡಬೇಕೆಂಬ ಉದ್ದೇಶದಿಂದ ಬ್ಯಾಂಕ್​ನವರಿಗೆ ಯಾವುದೇ ಮಾಹಿತಿ ನೀಡದೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಆಡಳಿತ ಮಂಡಳಿಯಲಿದ ತಮ್ಮ ಹುದ್ದೆಗಳಿಂದ ಹೊರಬಂದು ಸಂಬಂಧವಿಲ್ಲದ ವ್ಯಕ್ತಿಗಳನ್ನು ಕಂಪನಿಗೆ ನಿರ್ದೇಶಕರನ್ನಾಗಿ ನೇಮಿಸಿ ಬ್ಯಾಂಕ್​ನವರಿಗೆ ನಂಬಿಕೆ ದ್ರೋಹವೆಸಗಿ ಮೋಸ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್​​ 420 (ವಂಚನೆ) ಪ್ರಕರಣದ A1 ಶಾಸಕ ರಮೇಶ್ ಜಾರಕಿಹೊಳಿ, ವಸಂತ್ ವಿ ಪಾಟೀಲ್, ಶಂಕರ್ ಪವಾಡೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬ್ಯಾಂಕ್​ಗೆ ಸಾಲ ತೀರಿಸದ ಆರೋಪ: ರಮೇಶ್​ ಜಾರಕಿಹೊಳಿ ವಿರುದ್ಧ ಎಫ್​ಐಆರ್​ ದಾಖಲು

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಿನಲ್ಲಿ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನಿಂದ 2013ರಿಂದ 2017ರವರೆಗೆ ಒಟ್ಟು 232 ಕೋಟಿ 88 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಬಳಿಕ 2023ರ ವೇಳೆಗೆ 439 ಕೋಟಿ 7 ಲಕ್ಷ ರೂ. ಸಾಲ ಬಾಕಿ ಉಳಿದಿತ್ತು. ಆದ್ರೆ, ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಅವರು ವಿವಿಪುರಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟಿಡ್​ ಇಬ್ಬರು ಪದಾಧಿಕಾರಿಗಳ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಪ್ರಕರಣದಲ್ಲಿ ರಮೇಶ್​​ ಜಾರಕಿಹೊಳಿ ಎ1 ಆರೋಪಿಯಾಗಿದ್ದಾರೆ. ಇದೀಗ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:05 pm, Fri, 19 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ