AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ

ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತ, ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
Rakesh Nayak Manchi
Rakesh Nayak Manchi|

Updated on: Sep 08, 2023 | 9:17 AM

Share

ಬೆಂಗಳೂರು, ಸೆ.8: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಜೂನ್ 9 ರಂದು ತನಿಖೆಗೆ ಆದೇಶಿಸಲಾಗಿದೆ. ಸದ್ಯ ಇದರ ಪ್ರತಿ ವೈರಲ್ ಮೂಲಕ ಇಲಾಖಾ ತನಿಖೆಗೆ ಆದೇಶಿಸಿರುವುದು ಬೆಳಕಿಗೆ ಬಂದಿದೆ.

ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಹೊರಡಿಸಿರುವ ಆದೇಶದ ಪ್ರಕಾರ, ಕೇಂದ್ರ ನಿಯೋಜನೆಯಲ್ಲಿರುವ ಹಿರಿಯ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿರುವುದು ಇದು ಮೂರನೇ ಬಾರಿ. ಜೆಡಿಎಸ್ ಶಾಸಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಎಸ್‌ಆರ್ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರ್ಕಾರದ ಸರಕುಗಳ ಭಾಗವಾಗಿ 52 ರೂ.ಗೆ ಕಳಪೆ ಗುಣಮಟ್ಟದ ಚೀಲಗಳನ್ನು ಖರೀದಿಸಿದ್ದಾರೆ ಎಂದು ಎಸ್‌ಆರ್ ಮಹೇಶ್ ಅವರು ಆರೋಪಿಸಿದ್ದರು. ಅಲ್ಲದೆ, ಇದು ಮಾರುಕಟ್ಟೆಯಲ್ಲಿ 10-13 ರೂ.ಗೆ ಲಭ್ಯವಿದೆ ಎಂದು ಹೇಳಿದ್ದರು.

ಅವರು ತಮ್ಮ ಅಧಿಕೃತ ನಿವಾಸವನ್ನು ಅಕ್ರಮವಾಗಿ ನವೀಕರಿಸಿದ್ದಾರೆ ಮತ್ತು ಈಜುಕೊಳ ಮತ್ತು ಜಿಮ್ ಅನ್ನು ನಿರ್ಮಿಸಿದ್ದಾರೆ ಅಂತಾನೂ ಆರೋಪಿಸಿದ್ದರು. ಈ ಆರೋಪಗಳ ನಂತರ, ರೋಹಿಣಿ ಅವರನ್ನು ಆರಂಭದಲ್ಲಿ ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಕಳೆದ ವರ್ಷ ಅವರ ವಿರುದ್ಧ ತನಿಖೆಗೆ ಆದೇಶಿಸಿದ ನಂತರ ಯಾವುದೇ ಹುದ್ದಿ ನಿಗದಿ ಮಾಡದೆ ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ