AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ

ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತ, ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
Rakesh Nayak Manchi
|

Updated on: Sep 08, 2023 | 9:17 AM

Share

ಬೆಂಗಳೂರು, ಸೆ.8: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಜೂನ್ 9 ರಂದು ತನಿಖೆಗೆ ಆದೇಶಿಸಲಾಗಿದೆ. ಸದ್ಯ ಇದರ ಪ್ರತಿ ವೈರಲ್ ಮೂಲಕ ಇಲಾಖಾ ತನಿಖೆಗೆ ಆದೇಶಿಸಿರುವುದು ಬೆಳಕಿಗೆ ಬಂದಿದೆ.

ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಹೊರಡಿಸಿರುವ ಆದೇಶದ ಪ್ರಕಾರ, ಕೇಂದ್ರ ನಿಯೋಜನೆಯಲ್ಲಿರುವ ಹಿರಿಯ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿರುವುದು ಇದು ಮೂರನೇ ಬಾರಿ. ಜೆಡಿಎಸ್ ಶಾಸಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಎಸ್‌ಆರ್ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರ್ಕಾರದ ಸರಕುಗಳ ಭಾಗವಾಗಿ 52 ರೂ.ಗೆ ಕಳಪೆ ಗುಣಮಟ್ಟದ ಚೀಲಗಳನ್ನು ಖರೀದಿಸಿದ್ದಾರೆ ಎಂದು ಎಸ್‌ಆರ್ ಮಹೇಶ್ ಅವರು ಆರೋಪಿಸಿದ್ದರು. ಅಲ್ಲದೆ, ಇದು ಮಾರುಕಟ್ಟೆಯಲ್ಲಿ 10-13 ರೂ.ಗೆ ಲಭ್ಯವಿದೆ ಎಂದು ಹೇಳಿದ್ದರು.

ಅವರು ತಮ್ಮ ಅಧಿಕೃತ ನಿವಾಸವನ್ನು ಅಕ್ರಮವಾಗಿ ನವೀಕರಿಸಿದ್ದಾರೆ ಮತ್ತು ಈಜುಕೊಳ ಮತ್ತು ಜಿಮ್ ಅನ್ನು ನಿರ್ಮಿಸಿದ್ದಾರೆ ಅಂತಾನೂ ಆರೋಪಿಸಿದ್ದರು. ಈ ಆರೋಪಗಳ ನಂತರ, ರೋಹಿಣಿ ಅವರನ್ನು ಆರಂಭದಲ್ಲಿ ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಕಳೆದ ವರ್ಷ ಅವರ ವಿರುದ್ಧ ತನಿಖೆಗೆ ಆದೇಶಿಸಿದ ನಂತರ ಯಾವುದೇ ಹುದ್ದಿ ನಿಗದಿ ಮಾಡದೆ ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?