AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Warriors: ಕೊವಿಡ್ ಸೇನಾನಿಗಳಿಗೆ ಪ್ರೋತ್ಸಾಹ ಧನ 6 ತಿಂಗಳವರೆಗೂ ವಿಸ್ತರಣೆ ಮಾಡುವಂತೆ ಆದೇಶ

Covid Warriors Karnataka: ಆರೋಗ್ಯ ಇಲಾಖೆ ಹಾಗೂ ಎನ್‌ಹೆಚ್‌ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್‌ಗಳು, ಡಿ-ಗ್ರೂಪ್ ನೌಕರರಿಗೆ ನೀಡಲ್ಪಡುವ ವಿಶೇಷ ಭತ್ಯೆ ಮುಂದುವರೆಸಲಾಗಿದೆ.

Covid Warriors: ಕೊವಿಡ್ ಸೇನಾನಿಗಳಿಗೆ ಪ್ರೋತ್ಸಾಹ ಧನ 6 ತಿಂಗಳವರೆಗೂ ವಿಸ್ತರಣೆ ಮಾಡುವಂತೆ ಆದೇಶ
ಕೊವಿಡ್ ವಾರಿಯರ್ಸ್​
guruganesh bhat
|

Updated on:May 27, 2021 | 8:03 PM

Share

ಬೆಂಗಳೂರು: ಕೊರೊನಾ ಸೇನಾನಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಹಾಗೂ ಎನ್‌ಹೆಚ್‌ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್‌ಗಳು, ಡಿ-ಗ್ರೂಪ್ ನೌಕರರಿಗೆ ನೀಡಲ್ಪಡುವ ವಿಶೇಷ ಭತ್ಯೆಯನ್ನು ಇನ್ನೂ 6 ತಿಂಗಳ ಕಾಲ ಮುಂದುವರೆಸಲು ಆದೇಶ ನೀಡಲಾಗಿದೆ.

ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೊವಿಡ್ ವಾರಿಯರ್ ಅಥವಾ ಸೇನಾನಿಗಳಿಗೆ ನೀಡುತ್ತಿರುವ ವಿಶೇಷ ಭತ್ಯೆಯನ್ನು ಇನ್ನೂ 6 ತಿಂಗಳ ಕಾಲ ಮುಂದುವರೆಸುವುದಾಗಿ ಅವರು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಜತೆಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಘೋಷಿತ ಲಾಕ್ ಡೌನ್ ಆರ್ಥಿಕ ಪ್ಯಾಕೇಜ್​ನಲ್ಲಿಸಹಾಯ ಧನ ನೀಡಲು ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಹಣ ಬಿಡುಗಡೆ ಮಾಡುವಂತೆ ಆದೇಶಿಸಲಾಗಿದೆ. ತಲಾ 3000 ರೂ. ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

(Karnataka Govt Orders to extend the incentives for Covid Warriors to 6 months)

Published On - 7:56 pm, Thu, 27 May 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!