AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ

ಕರ್ನಾಟಕ ಸರ್ಕಾರವು ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲು ಚಿಂತನೆ ನಡೆಸಿದೆ

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ
ಪ್ರಾತಿನಿಧಿಕ ಚಿತ್ರ Image Credit source: Hindustan Times
TV9 Web
| Edited By: ವಿವೇಕ ಬಿರಾದಾರ|

Updated on:Jan 17, 2023 | 7:43 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) ಮದ್ಯ (Liquor) ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ (Excise Department) ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ. ಈ ಕುರಿತು ಅಬಕಾರಿ ಇಲಾಖೆ ಜನವರಿ 9 ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಅಧಿಕಾರಿ ವಿ ಯಶವಂತ್ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯ ಶಿಫಾರಸ್ಸಿನ ಮೇರೆಗೆ ಈ ಪ್ರಸ್ತಾವನೆಯನ್ನು ರಚಿಸಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ-1965 ರ ನಿಬಂಧನೆಗಳ ಪ್ರಕಾರ, ಮದ್ಯದ ಖರೀದಿ ಮತ್ತು ಸೇವನೆಗೆ ಕನಿಷ್ಠ 18 ವರ್ಷ. ಆದರೆ ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ಪ್ರಕಾರ, ಕನಿಷ್ಠ ಕಾನೂನು ವಯಸ್ಸು 21 ಆಗಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ಸರ್ಕಾರ ಮದ್ಯ ಸೇವನೆ ಮತ್ತು ಖರೀದಿ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಸಲು ಮುಂದಾಗಿದೆ.

ವಯೋಮಿತಿಯನ್ನು ಕಡಿಮೆಗೊಳಿಸುವಂತೆ ಮದ್ಯ ವ್ಯಾಪಾರಸ್ಥರು ಒತ್ತಾಯಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುತ್ತದೆ. ಮದ್ಯ ಮಾರಾಟದಿಂದ 2019-20ರಲ್ಲಿ 21,583 ಕೋಟಿ ರೂ., 2021-22ರಲ್ಲಿ ಮದ್ಯ ಮಾರಾಟದಿಂದ ರಾಜ್ಯಕ್ಕೆ 26,377 ಕೋಟಿ ರೂ. ಆದಾಯವಾಗಿದೆ. ಗೋವಾ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಪುದುಚೇರಿಯಂತಹ ಕೆಲವು ರಾಜ್ಯಗಳು ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 17 January 23

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ