Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ

ಕರ್ನಾಟಕ ಸರ್ಕಾರವು ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲು ಚಿಂತನೆ ನಡೆಸಿದೆ

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ
ಪ್ರಾತಿನಿಧಿಕ ಚಿತ್ರ Image Credit source: Hindustan Times
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 17, 2023 | 7:43 AM

ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) ಮದ್ಯ (Liquor) ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ (Excise Department) ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ. ಈ ಕುರಿತು ಅಬಕಾರಿ ಇಲಾಖೆ ಜನವರಿ 9 ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಅಧಿಕಾರಿ ವಿ ಯಶವಂತ್ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯ ಶಿಫಾರಸ್ಸಿನ ಮೇರೆಗೆ ಈ ಪ್ರಸ್ತಾವನೆಯನ್ನು ರಚಿಸಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ-1965 ರ ನಿಬಂಧನೆಗಳ ಪ್ರಕಾರ, ಮದ್ಯದ ಖರೀದಿ ಮತ್ತು ಸೇವನೆಗೆ ಕನಿಷ್ಠ 18 ವರ್ಷ. ಆದರೆ ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ಪ್ರಕಾರ, ಕನಿಷ್ಠ ಕಾನೂನು ವಯಸ್ಸು 21 ಆಗಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ಸರ್ಕಾರ ಮದ್ಯ ಸೇವನೆ ಮತ್ತು ಖರೀದಿ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಸಲು ಮುಂದಾಗಿದೆ.

ವಯೋಮಿತಿಯನ್ನು ಕಡಿಮೆಗೊಳಿಸುವಂತೆ ಮದ್ಯ ವ್ಯಾಪಾರಸ್ಥರು ಒತ್ತಾಯಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುತ್ತದೆ. ಮದ್ಯ ಮಾರಾಟದಿಂದ 2019-20ರಲ್ಲಿ 21,583 ಕೋಟಿ ರೂ., 2021-22ರಲ್ಲಿ ಮದ್ಯ ಮಾರಾಟದಿಂದ ರಾಜ್ಯಕ್ಕೆ 26,377 ಕೋಟಿ ರೂ. ಆದಾಯವಾಗಿದೆ. ಗೋವಾ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಪುದುಚೇರಿಯಂತಹ ಕೆಲವು ರಾಜ್ಯಗಳು ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 17 January 23

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ