AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ

ಕರ್ನಾಟಕ ಸರ್ಕಾರವು ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲು ಚಿಂತನೆ ನಡೆಸಿದೆ

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ
ಪ್ರಾತಿನಿಧಿಕ ಚಿತ್ರ Image Credit source: Hindustan Times
TV9 Web
| Edited By: ವಿವೇಕ ಬಿರಾದಾರ|

Updated on:Jan 17, 2023 | 7:43 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) ಮದ್ಯ (Liquor) ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ (Excise Department) ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ. ಈ ಕುರಿತು ಅಬಕಾರಿ ಇಲಾಖೆ ಜನವರಿ 9 ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಅಧಿಕಾರಿ ವಿ ಯಶವಂತ್ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯ ಶಿಫಾರಸ್ಸಿನ ಮೇರೆಗೆ ಈ ಪ್ರಸ್ತಾವನೆಯನ್ನು ರಚಿಸಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ-1965 ರ ನಿಬಂಧನೆಗಳ ಪ್ರಕಾರ, ಮದ್ಯದ ಖರೀದಿ ಮತ್ತು ಸೇವನೆಗೆ ಕನಿಷ್ಠ 18 ವರ್ಷ. ಆದರೆ ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ಪ್ರಕಾರ, ಕನಿಷ್ಠ ಕಾನೂನು ವಯಸ್ಸು 21 ಆಗಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ಸರ್ಕಾರ ಮದ್ಯ ಸೇವನೆ ಮತ್ತು ಖರೀದಿ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಸಲು ಮುಂದಾಗಿದೆ.

ವಯೋಮಿತಿಯನ್ನು ಕಡಿಮೆಗೊಳಿಸುವಂತೆ ಮದ್ಯ ವ್ಯಾಪಾರಸ್ಥರು ಒತ್ತಾಯಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುತ್ತದೆ. ಮದ್ಯ ಮಾರಾಟದಿಂದ 2019-20ರಲ್ಲಿ 21,583 ಕೋಟಿ ರೂ., 2021-22ರಲ್ಲಿ ಮದ್ಯ ಮಾರಾಟದಿಂದ ರಾಜ್ಯಕ್ಕೆ 26,377 ಕೋಟಿ ರೂ. ಆದಾಯವಾಗಿದೆ. ಗೋವಾ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಪುದುಚೇರಿಯಂತಹ ಕೆಲವು ರಾಜ್ಯಗಳು ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 17 January 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ