ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ; ರಾಜ್ಯ ಸರ್ಕಾರದಿಂದ ತಕ್ಷಣ 25 ಕೋಟಿ ರೂ. ಬಿಡುಗಡೆ

ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಆದೇಶ ಮಾಡಿತ್ತು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಉಚಿತ ಊಟ ವಿತರಣೆ ಮಾಡುವಂತೆ ಸೂಚಿಸಿತ್ತು.

ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ; ರಾಜ್ಯ ಸರ್ಕಾರದಿಂದ ತಕ್ಷಣ 25 ಕೋಟಿ ರೂ. ಬಿಡುಗಡೆ
ಇಂದಿರಾ ಕ್ಯಾಂಟೀನ್ (ಸಂಗ್ರಹ ಚಿತ್ರ)
Follow us
| Updated By: ganapathi bhat

Updated on:Aug 23, 2021 | 12:38 PM

ಬೆಂಗಳೂರು: ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ವಿತರಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ತಕ್ಷಣ 25 ಕೋಟಿ ರೂ. ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಆದೇಶ ಮಾಡಿತ್ತು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಉಚಿತ ಊಟ ವಿತರಣೆ ಮಾಡುವಂತೆ ಸೂಚಿಸಿತ್ತು.

ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಣೆಗೆ ಸೂಚನೆ ನೀಡಲಾಗಿದೆ. ಲಾಕ್​ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಂದರೆ, ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಬಗ್ಗೆ ಆದೇಶಿಸಿದ್ದಾರೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಒದಗಿಸಲು ನಿರ್ದೇಶನ ನೀಡಿದ್ದಾರೆ.

ಲಾಕ್‌ಡೌನ್‌ನಿಂದ ಬಡವರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ, ಆಹಾರ ಭದ್ರತೆ ಒದಗಿಸಲು ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ದಿನಗೂಲಿ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಿ. ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಲು ಕೋರ್ಟ್ ಸೂಚನೆ ನೀಡಿತ್ತು.

ಬೆಂಗಳೂರಿನಲ್ಲಿರುವ 202 ಇಂದಿರಾ ಕ್ಯಾಂಟೀನ್ ಗಳ ಮೂಲಕ ಮೂರು ಹೊತ್ತೂ ಉಚಿತವಾಗಿ ಸಿದ್ದಪಡಿಸಿದ ಆಹಾರ ನೀಡಲಾಗುವುದು. ಅಲ್ಲದೇ ಎನ್‌ಜಿಒಗಳ ಮೂಲಕವೂ ಅಗತ್ಯವಿರುವ ಪ್ರದೇಶಗಳಿಗೆ ಆಹಾರ ಒದಗಿಸಲಾಗುವುದು. ಪಡಿತರ ಚೀಟಿದಾರರಿಗೆ 10 ಕೆಜಿ ಆಹಾರ ಧಾನ್ಯ ನೀಡಲಾಗುವುದೆಂದು ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ. ಲಾಕ್‌ಡೌನ್​ನಿಂದ ದಿನಗೂಲಿ ನೌಕರರು, ಬಡವರು ಜೀವನಾಧಾರ ಕಳೆದುಕೊಂಡಿದ್ದಾರೆ. ಅಂತಹವರಿಗೆ ಆಹಾರ ಭದ್ರತೆ ಒದಗಿಸಬೇಕು. ಗ್ರಾಮಾಂತರ ಪ್ರದೇಶದ ಬಡವರಿಗೂ ಆಹಾರ ತಲುಪಿಸಬೇಕು. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

‘ಕಳೆದ 2 ದಿನದಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹಾಗೂ ಸಾವಿನ ಪ್ರಮಾಣದಲ್ಲಿ ಇಳಿಕೆ’

Published On - 7:09 pm, Tue, 11 May 21

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?