AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ, ಗಣಿತ ಶಿಕ್ಷಕರಿಗೆ ಬರ: 22 ಲಕ್ಷ ವಿದ್ಯಾರ್ಥಿಗಳಿಗೆ 9 ಸಾವಿರ ಶಿಕ್ಷಕರು!

ಕರ್ನಾಟಕದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಕರ ತೀವ್ರ ಕೊರತೆಯಿದೆ. ಸುಮಾರು 22 ಲಕ್ಷ ವಿದ್ಯಾರ್ಥಿಗಳಿಗೆ ಕೇವಲ 8,895 ವಿಜ್ಞಾನ, ಗಣಿತ ಶಿಕ್ಷಕರಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗುತ್ತಿದೆ. ಅತಿಥಿ ಶಿಕ್ಷಕರ ನೇಮಕಾತಿ ಒಂದು ತಾತ್ಕಾಲಿಕ ಪರಿಹಾರ ಮಾತ್ರ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅತ್ಯಗತ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ, ಗಣಿತ ಶಿಕ್ಷಕರಿಗೆ ಬರ: 22 ಲಕ್ಷ ವಿದ್ಯಾರ್ಥಿಗಳಿಗೆ 9 ಸಾವಿರ ಶಿಕ್ಷಕರು!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Dec 16, 2024 | 9:56 AM

Share

ಬೆಂಗಳೂರು, ಡಿಸೆಂಬರ್ 16: ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ ಹಾಗೂ ಗಣಿತ ಶಿಕ್ಷಕರ ಗಣನೀಯ ಕೊರತೆ ಇರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಕರ್ನಾಟಕವು ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಗೆ ಹೆಸರುವಾಸಿಯಾಗಿದ್ದರೂ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ಸುಮಾರು 22 ಲಕ್ಷ ವಿದ್ಯಾರ್ಥಿಗಳಿಗೆ ಕೇವಲ 8,895 ವಿಜ್ಞಾನ ಮತ್ತು ಗಣಿತ ಶಿಕ್ಷಕರಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 81,979 ಕನ್ನಡ ಶಿಕ್ಷಕರಿದ್ದರೆ, ಕೇವಲ 5,732 ಇಂಗ್ಲಿಷ್ ಶಿಕ್ಷಕರಿದ್ದಾರೆ. ಈ ಕೊರತೆಯನ್ನು ನೀಗಲು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಇದು ದೀರ್ಘಾವಧಿಯ ಪರಿಹಾರವಲ್ಲ ಎಂದು ಶಿಕ್ಷಣತಜ್ಞರು ಅಭಿಪ್ರಾಯಪಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಭಾಗದ ಹಲವು ಶಾಲೆಗಳು ಮುಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಕಳಪೆ ಫಲಿತಾಂಶಕ್ಕೂ ಕಾರಣ

ಪ್ರತಿ ವರ್ಷ ಕೆಲವು ಜಿಲ್ಲೆಗಳು ಅಥವಾ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಬರಲು ಶಿಕ್ಷಕರ ಕೊರತೆಯೂ ಪರೋಕ್ಷ ಕಾರಣವಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಾಥಮಿಕ ಶಾಲಾ ಹಂತದಲ್ಲೇ ಮಕ್ಕಳಿಗೆ ಸರಿಯಾಗಿ ಕಲಿಸದಿದ್ದರೆ, ಅವರಲ್ಲಿ ಕಲಿಕೆಯ ಆಸಕ್ತಿಯನ್ನು ಹುಟ್ಟುಹಾಕುವಲ್ಲಿ ಶಿಕ್ಷಕರು ವಿಫಲರಾದರೆ ಅದು ಸರ್ಕಾರದ ತಪ್ಪು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡದಲ್ಲಿ ಬೋಧನೆ ಮಾಡುವುದರಿಂದ ಮಕ್ಕಳು ವೇಗವಾಗಿ ಗ್ರಹಿಸಬಹುದು. ಆದರೆ, ಇತರ ವಿಷಯಗಳ ಶಿಕ್ಷಕರ ತೀವ್ರ ಕೊರತೆ ಅವರ ಕಲಿಕೆಯನ್ನು ಕುಂಠಿತ ಮಾಡುತ್ತಿದೆ ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ವಾಸುದೇವ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಶಿಕ್ಷಕರ ಸಂಖ್ಯೆ ಸಂಬಂಧಿತ ಅಂಕಿಅಂಶಗಳು ಆಘಾತಕಾರಿಯಾಗಿವೆ. ಇದು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಕುಂಠಿತಗೊಳಿಸುವಲ್ಲಿ ವ್ಯವಸ್ಥಿತ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದ್ದಾರೆ.

5, 8ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮಕ್ಕೆ ಸೇರಿಸುವುದು ಸರಿಯೇ?

ಕೆಲವೊಮ್ಮೆ, 5 ಅಥವಾ 8 ನೇ ತರಗತಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಕನ್ನಡದಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಬದಲಾಗುವಂತೆ ಒತ್ತಾಯಿಸಲಾಗುತ್ತದೆ. ಇದು ಅಪರಾಧಕ್ಕಿಂತ ಕಡಿಮೆಯಾದದ್ದೇನಲ್ಲ. ಯಾಕೆಂದರೆ, ಹೀಗೆ ಮಾಡಿದಾಗ ಮಕ್ಕಳು ಕಲಿಯಲು ಸಾಧ್ಯವಾಗದ ವಾತಾವರಣಕ್ಕೆ ತಳ್ಳಲ್ಪಡುತ್ತಾರೆ. ಆ ಸಂದರ್ಭದಲ್ಲಿ ಅವರ ಅಸಮರ್ಥತೆಗಾಗಿ ಅವಮಾನಕ್ಕೊಳಗಾಗುವ ಸಾಧ್ಯತೆಯೂ ಇದೆ ಎಂದು ಶರ್ಮಾ ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಇತ್ತೀಚೆಗೆ, ಸರ್ಕಾರವು ನಿಯಮಗಳಲ್ಲಿ ಮಾಡಿದ ಬದಲಾವಣೆಗಳಿಂದ ಸುಮಾರು ಒಂದು ಲಕ್ಷ ಶಿಕ್ಷಕರಿಗೆ ಹಿಂಬಡ್ತಿ ನೀಡಲಾಯಿತು. 2016 ರ ಮೊದಲು ನೇಮಕಗೊಂಡವರು 1ರಿಂದ 5ನೇ ತರಗತಿಗೆ ಮಾತ್ರ ಬೋಧಿಸುವಂತೆ ಸರಕಾರ ಹೇರಿರುವ ನಿರ್ಧಾರದಿಂದ ಹಲವು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಅಭಿವೃದ್ಧಿ ಶಿಕ್ಷಣತಜ್ಞ ನಿರಂಜನಾರಾಧ್ಯ ವಿಪಿ ಹೇಳಿದ್ದಾರೆ.

ಇದನ್ನೂ ಓದಿ: ಓದುತ್ತಿರುವ ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಈ ಸಿಂಪಲ್ ಟಿಪ್ಸ್ ​ ಟ್ರೈ ಮಾಡಿ

ಇಲಾಖೆಯಲ್ಲಿ 35,000 ಅತಿಥಿ ಶಿಕ್ಷಕರಿದ್ದು, ಅವರು 21.8 ಲಕ್ಷ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಅತಿಥಿ ಶಿಕ್ಷಕರ ಮೇಲಿನ ಅವಲಂಬನೆಯನ್ನು ಶಿಕ್ಷಣ ತಜ್ಞರು ಆಕ್ಷೇಪಿಸಿದ್ದಾರೆ. ಜತೆಗೆ, ಇದು ದೋಷಪೂರಿತ ವಿಧಾನ ಎಂದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:53 am, Mon, 16 December 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ