AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಖರೀದಿಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ 2,000 ಕೋಟಿ ಉಳಿತಾಯವಾಗಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ
ಕೊರೊನಾ ಲಸಿಕೆ
TV9 Web
| Edited By: |

Updated on: Jun 13, 2021 | 8:18 AM

Share

ಬೆಂಗಳೂರು: ಕೊರೊನಾ ಸೋಂಕಿನ ಪ್ರಭಾವ ಕಡಿಮೆ ಆಗುತ್ತಿದೆ. 2ನೇ ಅಲೆಯ ವೇಗ ನಿಯಂತ್ರಣಕ್ಕೆ ಬರ್ತಿದೆ. ಕೊರೊನಾ ಸಂಖ್ಯೆ, ಸಾವು ಇಳಿಕೆಯಾಗುತ್ತಿದೆ. ಹೀಗಿದ್ರೂ ಜನರಿಗೆ ಭಯ ಹೋಗಿಲ್ಲ. ಹೀಗಾಗಿ ಕೊರೊನಾ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಆದ್ರೆ ಕೆಲವೆಡೆ ಇನ್ನೂ ಕೂಡ ಲಸಿಕೆ ಅಭಾವ ಕಡಿಮೆಯಾಗಿಲ್ಲ. ಈಗ ಇದರ ನಡುವೆ ಲಸಿಕೆ ಖರೀದಿಯಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಖರೀದಿಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇದ್ರಿಂದ ರಾಜ್ಯ ಸರ್ಕಾರಕ್ಕೆ 2,000 ಕೋಟಿ ಉಳಿತಾಯವಾಗಿದೆ ಎಂದು ಹೇಳಲಾಗುತ್ತಿದೆ. ಜೂ.21ರಿಂದ ಕೇಂದ್ರದಿಂದ ರಾಜ್ಯಗಳಿಗೆ ಲಸಿಕೆ ಪೂರೈಕೆಯಾಗಲಿದೆ. ಅಲ್ಲಿಯವರೆಗೆ ಮಾತ್ರ ರಾಜ್ಯವೇ ಖರೀದಿಸಿ ಲಸಿಕೆ ವಿತರಿಸಲಿದೆ. ರಾಜ್ಯ ಸರ್ಕಾರ ಈವರೆಗೆ 25 ಲಕ್ಷ ಡೋಸ್ ಲಸಿಕೆ ಖರೀದಿಸಿ ಹಂಚಿಕೆ ಮಾಡಿದೆ.

NHM ಅಡಿ 3 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಸದ್ಯ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುವುದರಿಂದ ಲಸಿಕೆ ಖರೀದಿಸುವುದನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ರಾಜ್ಯದಲ್ಲಿ ಇದುವರೆಗೂ ಒಂದು ಕೋಟಿ 70 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಸುಮಾರು 40 ಲಕ್ಷ ಮಂದಿಗೆ 2 ಡೋಸ್ ನೀಡಲಾಗಿದೆ. ಸದ್ಯ ಲಸಿಕೆ ಪ್ರಮಾಣ ಕಡಿಮೆಯಿದ್ದು ಕೇಂದ್ರ ಸರ್ಕಾರದಿಂದ ಬಂದ ಬಳಿಕ ವ್ಯಾಕ್ಸಿನ್ ಹೆಚ್ಚಳ ಮಾಡಲಾಗುತ್ತಂತೆ. 18 ವರ್ಷ ಮೇಲ್ಪಟ್ಟವರಿಗೂ ಜೂನ್ 21ರ ನಂತರ ವ್ಯಾಕ್ಸಿನ್ ಹೆಚ್ಚಳ ಮಾಡಲಾಗುತ್ತೆ. ಪ್ರತಿದಿನ 3 ಲಕ್ಷ ಮಂದಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಗುರಿ ಹೊಂದಿದೆ. ಮೂರನೇ ಲಸಿಕೆ ವೇಳೆಗೆ ಶೇಖಡಾ 70 ಪರ್ಸೆಂಟ್ ಮಂದಿಗೆ ಲಸಿಕೆ ನೀಡುವ ಗುರಿ ಇದೆಯಂತೆ.

ಇದನ್ನೂ ಓದಿ: ತೆಂಗಿನ ಮರ ಬಿದ್ದು 6 ವರ್ಷದ ಬಾಲಕ ಸಾವು, ಬಾಲಕಿ ಆಸ್ಪತ್ರೆಗೆ ದಾಖಲು

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು