AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ; ಸುಧಾಕರ್​​ಗೆ ಸಂಕಷ್ಟ

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸೂಚಿಸಿದರು.

ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ; ಸುಧಾಕರ್​​ಗೆ ಸಂಕಷ್ಟ
ಕೆ ಸುಧಾಕರ್
ಗಣಪತಿ ಶರ್ಮಾ
|

Updated on: May 30, 2023 | 8:40 PM

Share

ಮುಖ್ಯಾಂಶಗಳು

  • ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದ ಪ್ರಕರಣ
  • ಹೊಸದಾಗಿ ತನಿಖೆಗೆ ಆದೇಶಿಸಿದ ಕಾಂಗ್ರೆಸ್ ಸರ್ಕಾರ
  • ಮಾಜಿ ಆರೋಗ್ಯ ಸಚಿವ ಕೆ ಸುಧಾಕರ್​ಗೆ ಸಂಕಷ್ಟ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ (Health Sector) ಸಂಬಂಧಿಸಿ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿಬಂದಿರುವ ವಿವಿಧ ಹಗರಣಗಳ ಆರೋಪಗಳ ಬಗ್ಗೆ ಹೊಸದಾಗಿ ತನಿಖೆ ಪ್ರಾರಂಭಿಸಲು ಹೊಸ ಕಾಂಗ್ರೆಸ್ (Congress Government) ಸರ್ಕಾರ ಮುಂದಾಗಿದೆ. ಈ ಮೂಲಕ, ಬಸವರಾಜ ಬೊಮ್ಮಾಯಿ ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ಪ್ರತಿಪಕ್ಷವನ್ನು ಗುರಿಯಾಗಿಸಿಕೊಂಡ ಬಿಜೆಪಿ ರಾಜಕಾರಣಿಗಳನ್ನು ಶಿಕ್ಷಿಸಲು ಹೊಸ ಸರ್ಕಾರವು ನಿರ್ಧರಿಸಿದೆ ಎಂಬ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸೂಚಿಸಿದರು. ದುರಂತ ಸಂಭವಿಸಿದ್ದ ಸಂದರ್ಭದಲ್ಲಿ ಡಾ. ಕೆ ಸುಧಾಕರ್ ಆರೋಗ್ಯ ಸಚಿವರಾಗಿದ್ದರು.

ಘಟನೆ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕೋವಿಡ್ ನಿರ್ವಹಣಾ ಸಮಿತಿಯು ಹೈಕೋರ್ಟ್‌ಗೆ ಈಗಾಗಲೇ ವರದಿ ಸಲ್ಲಿಸಿದ್ದು, ಮೇ 2-3, 2021 ರ ರಾತ್ರಿ 36 ಒಳರೋಗಿಗಳ ಸಾವಿಗೆ ಆಮ್ಲಜನಕದ ಲಭ್ಯತೆ ಕೊರತೆಯೇ ಕಾರಣ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ‘ಅಕ್ಕಿ ಗ್ಯಾರಂಟಿ’: ಕೇಂದ್ರ ಸರ್ಕಾರ ಒಪ್ಪಿದರೂ ಅಕ್ಕಿಭಾಗ್ಯ ಜಾರಿಗೆ ವಿಳಂಬ ಸಾಧ್ಯತೆ

ಈ ವಿಚಾರವಾಗಿ ವಿಧಾನಸೌಧದಲ್ಲಿ ತಮ್ಮ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಗುಂಡೂರಾವ್, ಸಾವಿಗೆ ಯಾರು ಹೊಣೆ ಮತ್ತು ತಪ್ಪಿತಸ್ಥರು ಯಾರು ಎಂಬುದರ ಪತ್ತೆಗೆ ಯಾವುದೇ ತನಿಖೆ ನಡೆದಿಲ್ಲ. ಹೀಗಾಗಿ ತಕ್ಷಣ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆ ಸಂದರ್ಭ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್, ಡಾ ಕೆ ಸುಧಾಕರ್ ಅವರನ್ನು ಗುರಿಯಾಗಿಸಿತ್ತು. ಆಸ್ಪತ್ರೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಾವು ಸಹಜವಲ್ಲ, ಕೊಲೆ ಎಂದು ಹೇಳಿದ್ದರು. ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ