ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?

ಕರ್ನಾಟಕದ ನೋಂದಣಿ ಇಲಾಖೆಯಲ್ಲಿ (Registration Department) 'ಕಾವೇರಿ-2.0' ತಂತ್ರಾಂಶವನ್ನು ಸರ್ಕಾರ ಜಾರಿಗೆ ತಂದಿದೆ. ಇದರಿಂದ ಕರ್ನಾಟಕದಾದ್ಯಂತ ಇನ್ಮುಂದೆ ಆಸ್ತಿ ನೋಂದಣಿ ಸುಲಭವಾಗಲಿದೆ. ಇನ್ನು ಈ ಕಾವೇರಿ -2 ತಂತ್ರಾಂಶ ಈ ಹೇಗೆ ಕಾರ್ಯನಿರ್ವಹಿಸಲಿದೆ?

ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?
Follow us
|

Updated on:Jun 21, 2023 | 2:31 PM

ಬೆಂಗಳೂರು: ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಇನ್ಮುಂದೆ ಆಸ್ತಿ ನೋಂದಣಿ(property registration )ಸುಲಭವಾಗಲಿದೆ. ಅಲ್ಲದೇ ಇದರ ಅನುಷ್ಠಾನದಿಂದ ಉಪನೋಂದಾಣಿ ಕಚೇರಿಯಲ್ಲಿ(registration Office)  ಜನದಟ್ಟಣೆ ಕಡಿಮೆಯಾಗಲಿದೆ. ಸಾರ್ವಜನಿಕರು ವಿಳಂಬವಿಲ್ಲದೆ ತಮ್ಮ ದಾಸ್ತಾವೇಜುಗಳನ್ನು ನೋಂದಾಣಿ ಮಾಡಿಕೊಳ್ಳಲು ಸಹಕಾರಿಯಾಗಿದೆ. ಉಪನೋಂದಾಣಿ ಕಚೇರಿಯಿಂದ ನೀಡುವ ಸೇವೆಗಳನ್ನು ಸಾರ್ವಜನಿಕರು ಆನ್​ಲೈನ್​ ಮುಖಾಂತರ ಪಡೆಯಬಹುದಾಗಿದೆ.

ಇದನ್ನೂ ಓದಿ: ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ

ಈ ತಂತ್ರಾಂಶದ ಮೂಲಕ ಸಾರ್ವಜನಿಕರು ತಮ್ಮ ಆಸ್ತಿಯ ವಿವರ, ಮೂಲ ದಾಖಲೆಗಳನ್ನು ಆನ್​ಲೈನ್​ ಮೂಲಕ ನೇರವಾಗಿ ಉಪನೋಂದಾಣಿಧಿಕಾರಿಗೆ ಕಳುಹಿಸಬಹುದಾಗಿದೆ. ಅಧಿಕಾರಿಗಳು ಪರಿಶೀಲಿಸಿದ ನೋಂದಾಣಿಗೆ ತಗಲುವ ವೆಚ್ಚವನ್ನು ಖಜಾನೆಗೆ ಆನ್​ಲೈನ್​ ಮೂಲಕ ಪಾವತಿಸಿ ನಮಗೆ ಬೇಕಾದ ದಿನಾಂಕ, ಸಮಯವನ್ನು ನಿಗದಿಪಡಿಸಿಕೊಳ್ಳಲು ಅವಕಾಶವಿದೆ. ನಿಗದಿತ ದಿನಾಂಕದಂದು ಕೆಲವೇ ನಿಮಿಷದಲ್ಲಿ ಭಾವಚಿತ್ರ, ಸಹಿ, ಹೆಬ್ಬೆಟ್ಟಿನ ಗುರುತು ತೆಗೆದುಕೊಂಡು ನೋಂದಾಣಿ ಮಾಡಿಕೊಡಲಾಗುತ್ತದೆ.

ರಾಜ್ಯದ 251 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ-2 ಸಾಫ್ಟ್‌ವೇರ್ ಕಾರ್ಯಾರಂಭ ಮಾಡಿದ್ದು, ಉಳಿದವುಗಳನ್ನು ಈ ವಾರದ ಅಂತ್ಯದೊಳಗೆ ಪೂರೈಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ಹೇಳಿದ್ದಾರೆ.

ಇನ್ನು ಕಾವೇರಿ-2 ತಂತ್ರಾಂಶದ ಅನುಕೂಲತೆಗಳು ಏನು ಎನ್ನುವುದನ್ನು ನೋಡುವುದಾದರೆ, ಆಸ್ತಿ ನೋಂದಣಿ ಎನ್ನುವುದು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ನೀಡುತ್ತಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಹಾವಳಿ, ಸರಿಯಾದ ಸಮಯಕ್ಕೆ ನೋಂದಣಿಯಾಗದೆ ಇರುವುದು, ಲಂಚ, ಭ್ರಷ್ಟಾಚಾರ ಇತ್ಯಾದಿಗಳೆಲ್ಲವೂ ಇತ್ತು. ಆದರೆ, ಆನ್‌ಲೈನ್‌ ಪ್ರಕ್ರಿಯೆಯಿಂದಾಗಿ ಇಂತಹ ತೊಂದರೆಗಳು ತಪ್ಪಲಿವೆ. ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ.

ಹೇಗೆ ಕಾರ್ಯನಿರ್ವಹಿಸಲಿದೆ ಕಾವೇರಿ -2 ತಂತ್ರಾಂಶ?

  • ಪೂರ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣ ಸಂಪರ್ಕರಹಿತವಾಗಿರುತ್ತದೆ. ಅಂದರೆ, ಸಂಪೂರ್ಣ ಆನ್‌ಲೈನ್‌ ಆಗಿರುತ್ತದೆ. ನಾಗರಿಕರು ನೋಂದಣಿ ಕಚೇರಿಗೆ ಆಗಮಿಸುವ ಮೊದಲೇ ಎಲ್ಲಾ ಮಾಹಿತಿಗಳನ್ನು ತಂತ್ರಾಂಶದಲ್ಲಿ ನಮೂದಿಸಿರಬೇಕು. ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್‌ ಮಾಡಿರಬೇಕು. ಆನ್‌ಲೈನ್‌ ಮೂಲಕವೇ ಉಪನೋಂದಣಾಧಿಕಾರಿಗಳ ಪರಿಶೀಲನೆಗೆ ಸಲ್ಲಿಸಲಾಗುತ್ತದೆ. ಇದನ್ನು ಪರಿಶೀಲಿಸಿದ ಬಳಿಕ ಸಂಬಂಧಪಟ್ಟ ಶುಲ್ಕವನ್ನು ಪಾವತಿಸಲು ಸೂಚಿಸಲಾಗುತ್ತದೆ. ಬಳಿಕ ನಾಗರಿಕರು ತಮ್ಮ ಅನುಕೂಲಕರವಾದ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಉಪನೋಂದಣಾಧಿಕಾರಿ ಕಚೇರಿಗೆ ಹೋಗಬಹುದು.
  •  ಇದು ನೋಂದಣಿ ಹಂತವಾಗಿದೆ. ಸರಕಾರದ ಪ್ರಕಾರ ಇದು ಕೇವಲ 10 ನಿಮಿಷಗಳ ಕೆಲಸ. ಹೋಗಿ ತಮ್ಮ ಭಾವಚಿತ್ರ ಮತ್ತು ಹೆಬ್ಬೆರಳಿನ ಗುರುತನ್ನು ಸೆರೆಹಿಡಿಯುವ ಸಲುವಾಗಿ ನಾಗರಿಕರು ನಿಗದಿತ ದಿನಾಂಕ, ಸಮಯದಂದು ಉಪ ನೋಂದಣಿ ಕಚೇರಿಗೆ ಹೋಗಿಬರಬೇಕು.
  • ನೋಂದಣಿ ಪ್ರಕ್ರಿಯೆ ಪೂರ್ತಿಯಾದ ಬಳಿಕ ಡಿಜಿಟಲ್‌ ಸಹಿ ಮಾಡಿದ ದಸ್ತಾವೇಜನ್ನು ನಾಗರಿಕರ ಲಾಗಿನ್‌ ಮತ್ತು ಅವರ ಡಿಜಿಲಾಕರ್‌ ಖಾತೆಗೆ ಕಳುಹಿಸಲಾಗುತ್ತದೆ. ನೋಂದಾಯಿತ ದಸ್ತಾವೇಜಿನ ಮಾಹಿತಿಯನ್ನು ಸಂಬಂಧಪಟ್ಟ ಸಂಯೋಜಿತ ಇಲಾಖೆಗೆ ಖಾತಾ ಬದಲಾವಣೆಗಾಗಿ ಕಳುಹಿಸಲಾಗುತ್ತದೆ ಎಂದು ಅಧಿಸೂಚನೆ ತಿಳಿಸಿದೆ.

ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:26 pm, Wed, 21 June 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ