ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದ ಅಲೋಕ್ ಕುಮಾರ್ ಅವರನ್ನು ಇದೀಗ ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ಜೊತೆಗೆ ರಾಮಚಂದ್ರ ರಾವ್ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ
ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ
Edited By:

Updated on: Sep 29, 2023 | 5:53 PM

ಬೆಂಗಳೂರು, ಸೆ.29: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಮಗನ ಶೋಕಿಗೆ ಕುಮ್ಮಕ್ಕು ನೀಡಿದ ನಂಜನಗೂಡು ಸಂಚಾರ ಪಿಎಸ್ಐ ಎತ್ತಂಗಡಿ: ವರ್ಗಾವಣೆಯನ್ನು ಸಾರ್ವಜನಿಕವಾಗಿ ಟೀಕಿಸಿದ ಪಿಎಸ್‌ಐ ಯಾಸ್ಮಿನ್

ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ