AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಮರು ಪರಿಶೀಲನೆ: ಜಾತಿ ಪ್ರಮಾಣಪತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನಿಡಿದ ಬೆಸ್ಕಾಂ

ಯೋಜನೆಯಿಂದ ಅರ್ನಹರನ್ನ ಕೈಬಿಡಲು, ಆರ್ಥಿಕ ಸೋರಿಕೆ ತಪ್ಪಿಸಲು ಸರ್ಕಾರ ಗೃಹಜ್ಯೋತಿ ಪರಿಷ್ಕರಣೆ ಶುರುಮಾಡಿದೆ. ಮನೆಮನೆಗೆ ಮೀಟರ್ ರೀಡರ್​ಗಳು ಭೇಟಿ ನೀಡಿ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಜಾತಿ ಪ್ರಮಾಣ ಪತ್ರದ ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಜಾತಿ ಮಾಹಿತಿ ನೀಡುವ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇದೀಗ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಗೃಹಜ್ಯೋತಿ ಮರು ಪರಿಶೀಲನೆ: ಜಾತಿ ಪ್ರಮಾಣಪತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನಿಡಿದ ಬೆಸ್ಕಾಂ
ಗೃಹಜ್ಯೋತಿ ಮರು ಪರಿಶೀಲನಾ ಕಾರ್ಯImage Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Jul 03, 2026 | 4:33 PM

Share

ಮುಖ್ಯಾಂಶಗಳು

  • ಗೃಹಜ್ಯೋತಿ ಮರು ಪರಿಶೀಲನಾ ಕಾರ್ಯ
  • ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ
  • ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸ್ಪಷ್ಟನೆ

ಬೆಂಗಳೂರು, ಜುಲೈ 03: ರಾಜ್ಯದ್ಯಂತ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಪರಿಶೀಲನೆ (Gruha Jyothi Revision) ಆರಂಭವಾಗಿದೆ. ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಮಾಹಿತಿ ಸಂಗ್ರಹದ ವೇಳೆ ಜಾತಿ ಪ್ರಮಾಣ ಕೇಳುವ ವಿಷಯ ಚರ್ಚೆ ಹುಟ್ಟುಹಾಕಿತ್ತು. ಉಚಿತ ವಿದ್ಯುತ್​ ನೀಡಲು ಜಾತಿ ಪ್ರಮಾಣ ಪತ್ರ ಏಕೆ ನೀಡಬೇಕು ಎಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ (BESCOM) ಅಧಿಕೃತ ಆದೇಶ ಹೊರಡಿಸಿದೆ.

ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬೆಸ್ಕಾಂ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗೃಹಜ್ಯೋತಿ ಮರು ಪರಿಶೀಲನಾ ಪ್ರಕ್ರಿಯೆ ವೇಳೆ ಜಾತಿ ಪ್ರಮಾಣಪತ್ರ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸದ್ಯ ಈ ವಿವಾದಕ್ಕೆ ತೆರೆ ಎಳೆದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ, ಮರು ಪರಿಶೀಲನೆ ವೇಳೆ ಜಾತಿ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: Gruha Jyoti Scheme: ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD ಅರ್ಚನಾ!

ಅಷ್ಟೇ ಅಲ್ಲದೆ, ಅರ್ಜಿಯಲ್ಲಿ ಅಥವಾ ಪರಿಶೀಲನಾ ಫಾರ್ಮ್‌ನಲ್ಲಿ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದ ಗ್ರಾಹಕರಿಗಾಗಿ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಹೊಸ ಆಯ್ಕೆಯನ್ನು ನೀಡಲಾಗಿದೆ. ಈ ಆಯ್ಕೆಯನ್ನು ಗುರುತು ಮಾಡುವ ಮೂಲಕ ಗ್ರಾಹಕರು ತಮ್ಮ ಜಾತಿ ವಿವರವನ್ನು ನೀಡದೆಯೇ ಮರು ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.

ಇದನ್ನೂ ಓದಿ: ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ

ಕಳೆದ ಬಾರಿ ಕೇವಲ ಆಧಾರ್ ಕಾರ್ಡ್​ ನಂಬರ್ ದಾಖಲಿಸಿ ಉಚಿತ ವಿದ್ಯುತ್ ಯೋಜನೆ ಲಾಭ ಪಡೆದುಕೊಳ್ಳಲಾಗಿತ್ತು. ಆದರೆ ಈ ಬಾರಿ ಆಧಾರ್ ಕಾರ್ಡ್ ಜೊತೆ ವೋಟರ್​ ಐಡಿ, ಪಾನ್ ಕಾರ್ಡ್​  ದಾಖಲೆಯನ್ನು ಕೊಡಬೇಕಾಗಿದೆ. ತೀವ್ರ ವಿರೋಧದ ಮಧ್ಯೆ ಇದೀಗ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ