AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.

Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
ಗೃಹ ಜ್ಯೋತಿ
ರಮೇಶ್ ಬಿ. ಜವಳಗೇರಾ
|

Updated on:Jun 14, 2023 | 2:13 PM

Share

ಮುಖ್ಯಾಂಶಗಳು

  • ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಮುಂದೂಡಿಕೆ
  • ಜೂನ್​ 18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿದ ಸರ್ಕಾರ
  • ತಾಂತ್ರಿಕ ದೋಷ ಅರ್ಜಿ ಸಲ್ಲಿಕೆ ಮುಂದೂಡಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದ್ರೆ,  ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿದೆ. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ ಇಲ್ಲ. ಬದಲಾಗಿ ಜೂನ್ 18ರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನೂ ಓದಿ: ಫ್ರೀ ವಿದ್ಯುತ್​ಗಾಗಿ 2.14 ಕೋಟಿ ಅರ್ಜಿದಾರರು ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸೋಕೆ ಸಾಧ್ಯನಾ? ಟೆಕ್ನಿಕಲ್ ಎಕ್ಸ್​ಪರ್ಟ್ಸ್​ ಹೇಳುವುದೇನು

ಕರ್ನಾಟಕ ವಿಧಾನಸಭಾ ಚುನವಾಣೆ ವೇಳೆ ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳಲ್ಲಿ 200 ಯೂನಿಟ್‌ ಉಚಿತವಾಗಿ ನೀಡುವ ಗ್ಯಾರಂಟಿಯೂ ಕೂಡ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರಿ ಬಹುಮತ ಗಳಿಸಿದ ಕಾಂಗ್ರೆಸ್‌ ಸರ್ಕಾರ ರಚಿಸಿದ ಮೊದಲನೇ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಅನುಮೋದನೆ ನೀಡಲಾಗಿತ್ತು. ಇನ್ನು ಗೃಹಜ್ಯೋತಿ ಯೋಜನೆಗೆ ಕೆಲವು ಷರತ್ತುಗಳನ್ನು ವಿಧಿಸಿದ್ದ ಸರ್ಕಾರವು ಜೂನ್ ‌15ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಅದರಂತೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು. ಆದ್ರೆ, ಕೆಲ ತಾಂತ್ರಿಕ ದೋಷದಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ.

Published On - 2:03 pm, Wed, 14 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ