AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swadesh Darshan: ಸ್ವದೇಶ್ ದರ್ಶನ್ ಯೋಜನೆಗೆ ಕರ್ನಾಟಕದಿಂದ ಹಂಪಿ, ಮೈಸೂರು ಆಯ್ಕೆ

ಸ್ವದೇಶ್ ದರ್ಶನ್ ಯೋಜನೆಯು ದೇಶದ ಪ್ರವಾಸೋದ್ಯಮ ಅಭಿವೃದ್ಧಿ ಪಥದಲ್ಲಿ ಹೊಸ ಮೈಲಿಗಲ್ಲಾಗಿದೆ. ಇದೀಗ ಈ ಯೋಜನೆಗೆ ಕರ್ನಾಟಕ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿದೆ.

Swadesh Darshan: ಸ್ವದೇಶ್ ದರ್ಶನ್ ಯೋಜನೆಗೆ ಕರ್ನಾಟಕದಿಂದ ಹಂಪಿ, ಮೈಸೂರು ಆಯ್ಕೆ
ಸ್ವದೇಶ್ ದರ್ಶನ್ ಯೋಜನೆ
TV9 Web
| Edited By: |

Updated on: Jan 05, 2023 | 5:41 PM

Share

ಬೆಂಗಳೂರು: ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಮಹತ್ವದ ಯೋಜನೆ ಆರಂಭಿಸಿದ್ದು, ಇದೀಗ ಈ ಸ್ವದೇಶ್ ದರ್ಶನ್ 2.0 ಯೋಜನೆಗೆ (Swadesh Darshan 2.0 Scheme,) ಹಂಪಿ ಹಾಗೂ ಮೈಸೂರು(Hampi And Mysuru) ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ವದೇಶ್ ದರ್ಶನ್ 2.0 ಯೋಜನೆಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ್, ಚಂಡೀಗಢ, ಗೋವಾ, ಗುಜರಾತ್, ಕೇರಳ ರಾಜ್ಯಗಳ ತಲಾ ಎರಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿದೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯವು 2014-15 ರಲ್ಲಿ ಪ್ರಾರಂಭಿಸಿದ ಸ್ವದೇಶ್ ದರ್ಶನ್ 2.0 ಯೋಜನೆಯಲ್ಲಿ ಹಂಪಿ ಮತ್ತು ಮೈಸೂರು ಇರುವುದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದೆ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ವದೇಶ್ ದರ್ಶನ್ ಯೋಜನೆಯು ದೇಶದ ಪ್ರವಾಸೋದ್ಯಮ ಅಭಿವೃದ್ಧಿ ಪಥದಲ್ಲಿ ಹೊಸ ಮೈಲಿಗಲ್ಲಾಗಿದೆ. ಭಾರತದಲ್ಲಿ ಪ್ರೇಕ್ಷಣೀಯ ಸ್ಥಳಗಳ ಸಂಖ್ಯೆಗೆ ಕೊರತೆಯಿಲ್ಲ. ಹೀಗಾಗಿ ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ್ ಯೋಜನೆ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿದೆ. ವಿಭಿನ್ನ ವಿಷಯದ ಪ್ರವಾಸಿ ಸರ್ಕ್ಯೂಟ್‌ಗಳನ್ನು ಸಂಯೋಜಿಸುವ ಮೂಲಕ ಒಟ್ಟಾರೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು 2015 ರಲ್ಲಿ ಆರಂಭಿಸಿತು.

ಸ್ವದೇಶ್ ದರ್ಶನ್ ಯೋಜನೆಯು ಪ್ರವಾಸೋದ್ಯಮದ ಅಭಿವೃದ್ಧಿಯ ಜೊತೆಗೆ ಪಾರದರ್ಶಕ ಭಾರತ ಅಭಿಯಾನ, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮೊದಲಾದ ಯೋಜನೆಗಳನ್ನು ಸಂಯೋಜಿಸುತ್ತದೆ. ಪ್ರವಾಸೋದ್ಯಮದ ಜೊತೆಗೆ ಈ ಎಲ್ಲಾ ಯೋಜನೆಗಳ ಸಮಗ್ರ ಅಭಿವೃದ್ಧಿ ಸಾಧಿಸುವುದು ಕೇಂದ್ರದ ಗುರಿಯಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ