AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ ‘ಋತುಸ್ರಾವ ರಜೆ’ ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ

ಕರ್ನಾಟಕ ಹೈಕೋರ್ಟ್ 18-52 ವರ್ಷದ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ 'ಋತುಸ್ರಾವ ರಜೆ'ಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಇದು ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಬದುಕುವ ಹಕ್ಕು ಮತ್ತು ಘನತೆಯ ಅವಿಭಾಜ್ಯ ಅಂಗವಾಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಹಾಗೂ 'ಕರ್ನಾಟಕ ಋತುಸ್ರಾವ ರಜೆ ವಿಧೇಯಕ-2025' ರೂಪಿಸಲು ಆದೇಶಿಸಿದೆ.

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ 'ಋತುಸ್ರಾವ ರಜೆ' ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 16, 2026 | 7:48 AM

Share

ಬೆಂಗಳೂರು, ಏ.16: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ನೀಡಲು ಹಿಂದೆ-ಮುಂದೆ ನೋಡುತ್ತಿದೆ. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್​​ ನೀಡಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, “ಮಹಿಳೆಯರ ಋತುಸ್ರಾವದ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ಬರುವ ‘ಬದುಕುವ ಹಕ್ಕಿನ’ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಘನತೆಯ ಪ್ರಶ್ನೆ” ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ, ಈ ಕುರಿತು ಪ್ರಸ್ತಾವಿತ ‘ಕರ್ನಾಟಕ ಋತುಸ್ರಾವ ರಜೆ ಮತ್ತು ನೈರ್ಮಲ್ಯ ವಿಧೇಯಕ-2025’ ಅನ್ನು ಶೀಘ್ರವಾಗಿ ಕಾನೂನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು

ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More