AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Dec 22, 2020 | 10:45 AM

Share

ಬೆಂಗಳೂರು: ಬಿಜೆಪಿಯ ಶಾಸಕರು-ಸಚಿವರ ವಿರುದ್ಧ ದಾಖಲಾಗಿದ್ದ 62 ಕ್ರಿಮಿನಲ್​ ಮೊಕದ್ದಮೆಯನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದೇಶವನ್ನು ಜಾರಿ ಮಾಡದಂತೆ ಸೂಚಿಸಿದೆ.

ಕೆಲವು ರೈತ ಪ್ರತಿಭಟನೆಗಳು, ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಒಟ್ಟು 62 ಕ್ರಿಮಿನಲ್​ ಕೇಸ್​ಗಳನ್ನು ಕೈಬಿಡುವ ಸಂಬಂಧ ಆಗಸ್ಟ್​ 31ರಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಾನವ ಹಕ್ಕು ಸಂಸ್ಥೆಯಾದ ಪೀಪಲ್​ ಯೂನಿಯನ್​ ಆಫ್ ಸಿವಿಲ್​ ಲಿಬರ್ಟೀಸ್​ (PUCL)ನ ಕರ್ನಾಟಕ ವಿಭಾಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು 2021ರ ಜನವರಿ 29ಕ್ಕೆ ಮುಂದೂಡಿದೆ. ಈ ಮಧ್ಯೆ ಜನವರಿ 22ರೊಳಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಸಂಪುಟ ಉಪಸಮಿತಿಯ ನೇತೃತ್ವ ವಹಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶಿಫಾರಿಸಿನ ಆಧಾರದಲ್ಲಿ, ಯಡಿಯೂರಪ್ಪ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು. ಅದರ ಅನ್ವಯ ವಿವಿಧ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕಾನೂನು ಉಲ್ಲಂಘನೆ ಮಾಡಿದ್ದರಿಂದ ಮೈಸೂರು ಸಂಸದ ಪ್ರತಾಪ್​ ಸಿಂಹ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್​, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್​ ಪ್ರಕರಣಗಳು ರದ್ದಾಗುತ್ತಿದ್ದವು. ಆದರೆ ಸದ್ಯಕ್ಕಂತೂ ಆ ಭಾಗ್ಯವನ್ನು ಹೈಕೋರ್ಟ್​ ನೀಡುತ್ತಿಲ್ಲ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂದರ್ಶನ: B Y ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ನನಗೆ ಯಾವ ದೂರೂ ಬಂದಿಲ್ಲ

Published On - 5:01 pm, Mon, 21 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ