AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Dec 22, 2020 | 10:45 AM

Share

ಬೆಂಗಳೂರು: ಬಿಜೆಪಿಯ ಶಾಸಕರು-ಸಚಿವರ ವಿರುದ್ಧ ದಾಖಲಾಗಿದ್ದ 62 ಕ್ರಿಮಿನಲ್​ ಮೊಕದ್ದಮೆಯನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದೇಶವನ್ನು ಜಾರಿ ಮಾಡದಂತೆ ಸೂಚಿಸಿದೆ.

ಕೆಲವು ರೈತ ಪ್ರತಿಭಟನೆಗಳು, ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಒಟ್ಟು 62 ಕ್ರಿಮಿನಲ್​ ಕೇಸ್​ಗಳನ್ನು ಕೈಬಿಡುವ ಸಂಬಂಧ ಆಗಸ್ಟ್​ 31ರಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಾನವ ಹಕ್ಕು ಸಂಸ್ಥೆಯಾದ ಪೀಪಲ್​ ಯೂನಿಯನ್​ ಆಫ್ ಸಿವಿಲ್​ ಲಿಬರ್ಟೀಸ್​ (PUCL)ನ ಕರ್ನಾಟಕ ವಿಭಾಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು 2021ರ ಜನವರಿ 29ಕ್ಕೆ ಮುಂದೂಡಿದೆ. ಈ ಮಧ್ಯೆ ಜನವರಿ 22ರೊಳಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಸಂಪುಟ ಉಪಸಮಿತಿಯ ನೇತೃತ್ವ ವಹಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶಿಫಾರಿಸಿನ ಆಧಾರದಲ್ಲಿ, ಯಡಿಯೂರಪ್ಪ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು. ಅದರ ಅನ್ವಯ ವಿವಿಧ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕಾನೂನು ಉಲ್ಲಂಘನೆ ಮಾಡಿದ್ದರಿಂದ ಮೈಸೂರು ಸಂಸದ ಪ್ರತಾಪ್​ ಸಿಂಹ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್​, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್​ ಪ್ರಕರಣಗಳು ರದ್ದಾಗುತ್ತಿದ್ದವು. ಆದರೆ ಸದ್ಯಕ್ಕಂತೂ ಆ ಭಾಗ್ಯವನ್ನು ಹೈಕೋರ್ಟ್​ ನೀಡುತ್ತಿಲ್ಲ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂದರ್ಶನ: B Y ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ನನಗೆ ಯಾವ ದೂರೂ ಬಂದಿಲ್ಲ

Published On - 5:01 pm, Mon, 21 December 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು