AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

Hookah Ban: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಇಂದು (ಫೆಬ್ರವರಿ 07) ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 07, 2024 | 9:14 PM

Share

ಬೆಂಗಳೂರು, (ಫೆಬ್ರವರಿ 07): ಕರ್ನಾಟಕದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ (Karnataka Health and Family Welfare department) ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಹುಕ್ಕಾ ನಿಷೇಧದ ಸುಳಿವು ನೀಡಿದ್ದ ಸಚಿವ

ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಿಂದಿನ ಸರ್ಕಾರಗಳು ಕ್ರಮಗಳನ್ನು ಕೈಗೊಂಡು ಕಾಲಕಾಲಕ್ಕೆ ಬದಲಾವಣೆಗಳನ್ನು ತರಲು ಪ್ರಯತ್ನಿಸಿದವು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲೂ ಹುಕ್ಕಾ ನಿಷೇಧ ಮತ್ತು ನಗರ ಪ್ರದೇಶಗಳಲ್ಲಿ ಧೂಮಪಾನ ನಿಷೇಧ ವಲಯಗಳನ್ನು ರಚಿಸುವ ಪ್ರಯತ್ನಗಳು ನಡೆದಿದ್ದವು. ಈ ಉಪಕ್ರಮಕ್ಕಾಗಿ ನಾವು ವಿಶ್ವಸಂಸ್ಥೆಯಿಂದ ಪ್ರಶಸ್ತಿಯನ್ನು ಸಹ ಪಡೆದಿದ್ದೇವೆ. ಇಂತಹ ಉತ್ಪನ್ನಗಳನ್ನು ನಿಷೇಧಿಸುವಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ದಿನೇಶ್ ಗುಂಡೂರಾವ್ ಇತ್ತೀಚೆಗೆ ಹೇಳಿದ್ದರು.

ಹುಕ್ಕಾ ಬಾರ್‌ಗಳು ಜನರ ಮೇಲೆ ವಿಶೇಷವಾಗಿ ಯುವಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಈಗಿರುವ COPTA ಕ್ಕೆ ನಾವು ಕೆಲವು ತಿದ್ದುಪಡಿಗಳನ್ನು ಮಾಡಿದ್ದೇವೆ ಮತ್ತು ಸಾರ್ವಜನಿಕವಾಗಿ ಸಿಗರೇಟ್ ಮಾತ್ರವಲ್ಲದೆ ಇತರ ಎಲ್ಲಾ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಿದ್ದೇವೆ. ದಂಡದ ಮೊತ್ತ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 8:51 pm, Wed, 7 February 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ