ರೋಗಿಗಳ ಬಳಿ ಹಣ ಸುಲಿಗೆ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಶಾಕ್, ಆಸ್ಪತ್ರೆ ಹೊರಗೆ ದರ ಪಟ್ಟಿ ಅಳವಡಿಸಲು ಆದೇಶ

ಕೊರೊನಾ ಬಳಿಕ ಜನರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಯಾವುದೇ ಸಮಸ್ಯೆ ಅಂದ್ರೂ ಹಾಸ್ಪೆಟಲ್ ಮೊರೆ ಹೋಗ್ತೀದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚ ಸೇರಿದಂತೆ ಇತರೆ ಚಿಕಿತ್ಸಾ ವೆಚ್ಚಗಳನ್ನ ಏರಿಕೆ ಮಾಡಿ ಸುಲಿಗೆಗೆ ಮುಂದಾಗಿದ್ವು. ಇತಂಹ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಶಾಕ್ ಕೊಟ್ಟಿದೆ.

ರೋಗಿಗಳ ಬಳಿ ಹಣ ಸುಲಿಗೆ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಶಾಕ್, ಆಸ್ಪತ್ರೆ ಹೊರಗೆ ದರ ಪಟ್ಟಿ ಅಳವಡಿಸಲು ಆದೇಶ
ಸಚಿವ ದಿನೇಶ್ ಗುಂಡೂರಾವ್
Follow us
| Updated By: ಆಯೇಷಾ ಬಾನು

Updated on: Nov 12, 2023 | 7:45 AM

ಬೆಂಗಳೂರು, ನ.12: ಜನ ಖಾಸಗಿ ಆಸ್ಪತ್ರೆಗೆ ಕಾಲಿಟ್ರೆ ಸಾಕು, ಕುಳಿತ್ರು, ನಿಂತ್ರುರು ಬಿಲ್. ಅಕ್ಷಸಹಃ ಸುಲಿಗೆಗೆ ಮುಂದಾಗಿವೆ ಖಾಸಗಿ ಆಸ್ಪತ್ರೆಗಳು. ಜ್ವರ, ಕೆಮ್ಮು, ನೆಗಡಿ ಅಂತಾ ಹೋದ್ರು ಸಾವಿರಾರು ರೂಪಾಯಿ ಬಿಲ್ ಮಾಡ್ತಾರೆ. ಇದು ಜನರ ಪರದಾಟಕ್ಕೆ ಕಾರಣವಾಗ್ತೀವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ (Private Hospitals) ಸುಲಿಗೆಗೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಕೆಪಿಎಂಇ ಮುಖಾಂತರ ಅಂಗೀಕೃತವಾದ ಆಸ್ಪತ್ರೆಗಳು ಚಿಕಿತ್ಸಾ ದರ ಪಟ್ಟಿಯನ್ನ ಆಸ್ಪತ್ರೆಯ ಅವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಅಳವಡಿಸಬೇಕು. ಯಾವ ಯಾವ ಚಿಕಿತ್ಸೆಗಳಿಗೆ ದರ ಎಷ್ಟು ಎಂಬ ದರ ನಿಗದಿಯ ಪಟ್ಟಿಯನ್ನ ಅಳವಡಿಸಬೇಕು ಎಂದು ಆರೋಗ್ಯ ಇಲಾಖೆ (Karnataka Health Department) ಆದೇಶ ಮಾಡಿದೆ.

ಹೌದು, ಕೆಪಿಎಂಇ ಮುಖಾಂತರ ಅಂಗೀಕೃತವಾದ ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ದರ ಪಟ್ಟಿ ಬೋರ್ಡ್ ಗಳನ್ನ ಆಸ್ಪತ್ರೆಗಳು ಹೊರಗೆ ಅಳವಡಿಸುವಂತೆ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೆ ಯಾವೆಲ್ಲ ಚಿಕಿತ್ಸೆಗೆ ಏನು ದರ ಅಂತಾ ನಿಗದಿ ಮಾಡಿರುವ ಪಟ್ಟಿಯನ್ನ ಆಸ್ಪತ್ರೆಯ ಅವರಣದಲ್ಲಿ ಸಾರ್ವಜನಿಕರಿಗೆ ತೊರುವ ರೀತಿಯಲ್ಲಿ ಹಾಕಬೇಕು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆಸ್ಪತ್ರೆಗಳ ಹೊರ ಭಾಗದಲ್ಲಿ ದರ ಪಟ್ಟಿ ಅಳವಡಿಸಬೇಕು. ಇಲ್ಲದಿದ್ದರೆ ದರ ಪಟ್ಟಿ ಅಳವಡಿಸದ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವ ಬಗ್ಗೆ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಶಾಕ್ ಕೊಟ್ಟಿದೆ.

ಇದನ್ನೂ ಓದಿ: ಮನೆ ಮನೆಗೆ ಬರಲಿದೆ ಔಷಧ ಪೆಟ್ಟಿಗೆ; 30 ವರ್ಷ ಮೇಲ್ಪಟ್ಟವರಿಗೆ ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

ಒಟ್ನಲ್ಲಿ ಖಾಸಗಿ ಆಸ್ಪತ್ರೆ ಅಂದ್ರೆ ಜನ ಒಂದು ಕ್ಷಣ ಬೆಚ್ಚಿಬೀಳ್ತಾರೆ. ಟ್ರೀಟ್ಮೆಂಟ್ ಅಂತಾ ಹೋದ್ರೆ ಸಾಕು ಲಕ್ಷ ಲಕ್ಷ ಸುಲಿಗೆ ಮಾಡ್ತೀದ್ದು. ಹೀಗಾಗಿ ಆರೋಗ್ಯ ಇಲಾಖೆ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳಿಗೆ ಶಾಕ್ ನೀಡಲು ಮುಂದಾಗಿದ್ದು ಚಿಕಿತ್ಸಾ ದರ ಪಟ್ಟಿ ಅಳವಡಿಸುವಂತೆ ಹೇಳಿದೆ. ಆದರೆ ಇದು ಎಷ್ಟರ ಮಟ್ಟಿಗೆ ಜಾರಿ ಯಾಗುತ್ತೆ ಅಂತಾ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ