Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಸರ್ಕಾರ ಮಹತ್ವದ ಆದೇಶ

ಅತ್ತ ದೀರ್ಘ ಕಾಲದ ರೋಗದಿಂದ ಬದುಕಲೂ ಆಗದೆ ಇತ್ತ ಸಾಯಲೂ ಆಗದೆ ಜೀವನ್ಮರಣ ಸ್ಥಿತಿಯಲ್ಲಿರುವ ರೋಗಿಗಳಿಗೆ ದಯಾಮರಣದ ಹಕ್ಕನ್ನು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ ಪಾಲಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ದಯಾಮರಣಕ್ಕೆ ಅನುಮತಿ ಪ್ರಕ್ರಿಯೆ ಹೇಗಿರಲಿದೆ ಎಂಬುದೂ ಸೇರಿದಂತೆ ಇತರ ಮಾಹಿತಿ ಇಲ್ಲಿದೆ.

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಸರ್ಕಾರ ಮಹತ್ವದ ಆದೇಶ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: Ganapathi Sharma

Updated on:Jan 31, 2025 | 2:22 PM

ಬೆಂಗಳೂರು, ಜನವರಿ 31: ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್​​ನ ನಿರ್ದೇಶನ ಜಾರಿ ಮಾಡಿದಂತಾಗಿದೆ.

ದಯಾಮರಣಕ್ಕೆ ಅನುಮತಿ ಪ್ರಕ್ರಿಯೆ ಹೇಗೆ?

ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್​​ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್​​ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್​​ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.

ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ನಂತರ ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್​​ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯುತ್ತಾರೆ.

ಸುಪ್ರೀಂ ಕೋರ್ಟ್ ಏನು ಹೇಳಿತ್ತು?

ತಾವು ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಸರಿಸುಮಾರು 42 ವರ್ಷಗಳ ಕಾಲ ಜೀವಚ್ಛವದಂತೆ ಬದುಕಿದ ಅರುಣಾ ಅರುಣಾ ಶಾನಭಾಗ್‌ ಅವರ ದಯಾಮರಣ ಅರ್ಜಿಯ ಕುರಿತ ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ದಯಾಮರಣ ನೀಡುವ ವಿಚಾರವಾಗಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ನೀವು 35 ರಿಂದ 40 ವರ್ಷ ವಯಸ್ಸಿನವರಾಗಿದ್ದರೆ, ಈ ವಿಷಯಗಳನ್ನು ನೆನಪಿನಲ್ಲಿಡಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:02 pm, Fri, 31 January 25

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು