ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ರಾಜ್ಯದಲ್ಲಿ ಹೃದಯಾಘಾತದಿಂದ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು ದುರ್ದೈವದ ಸಂಗತಿ. ಇತ್ತೀಚಿಗೆ ಬಾಲಕಿಯೊಬ್ಬಳು ಮೃತಪಟ್ಟಿದ್ದು ಸುದ್ದಿಯಾಗಿತ್ತು. ಈ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಡಾ. ಪುನಿತ್ ರಾಜಕುಮಾರ್​ ಯೋಜನೆಯನ್ನು 2023-24 ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು.

ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ
ಪುನಿತ್​ ರಾಜಕುಮಾರ್​ (ಎಡಚಿತ್ರ) ಎಇಡಿ ಸಾಧನ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on:Aug 20, 2023 | 2:23 PM

ಬೆಂಗಳೂರು (ಆ.20): ರಾಜ್ಯದಲ್ಲಿ ಹೃದಯಾಘಾದಿಂದ (Heart Attack) ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು ದುರ್ದೈವದ ಸಂಗತಿ. ಇತ್ತೀಚಿಗೆ ಬಾಲಕಿಯೊಬ್ಬಳು ಮೃತಪಟ್ಟಿದ್ದು ಸುದ್ದಿಯಾಗಿತ್ತು. ಈ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಡಾ. ಪುನಿತ್ ರಾಜಕುಮಾರ್ (Puneeth Rajkumar)​ ಯೋಜನೆಯನ್ನು 2023-24 ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಿಸಿದ್ದರು. ಇದೀಗ ಈ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಎಲ್ಲ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

ಈ ಯೋಜನೆಗೆ ಮೊದಲ ಹಂತವಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜಯದೇವ ಆಸ್ಪತ್ರೆಯ ಅಡಿಯಲ್ಲಿ 45 ತಾಲೂಕು ಆಸ್ಪತ್ರೆಗಳನ್ನು ತರಲಾಗಿದೆ. ಈ ವ್ಯಾಪ್ತಿಯ 45 ಆಸ್ಪತ್ರೆಗಳಲ್ಲಿ ಏನಾದರೂ ಹೃದಯಾಘಾತವಾದರೇ ಅಥವಾ ಹೃದಯ ಸಂಬಂಧಿ ತುರ್ತು ಸಮಸ್ಯೆ ಕಂಡು ಬಂದರೇ ತಜ್ಞ ವೈದ್ಯರು ವಿಡಿಯೋ ಕಾನ್ಪರೇನ್ಸ್ ಮೂಲಕ ರೋಗಿಯನ್ನು ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಗೆ ಸಲಹೆ ನೀಡುತ್ತಾರೆ.

ಇದನ್ನೂ ಓದಿ: ಮಂಗಳೂರು: ಸ್ಪಂದನಾ ವಿಜಯ್‌ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಹೃದಯಘಾತದಿಂದ ರೋಗಿ ಆಸ್ಪತ್ರೆಗೆ ದಾಖಲಾದ ನಂತರ ತಜ್ಞ ವೈದ್ಯರ ತಂಡ ಆ ರೋಗಿಯ ಹಿಸ್ಟರಿ ಪಡೆಯುತ್ತಾರೆ. ನಂತರ ಸ್ಥಳದಲ್ಲಿರುವ ವೈದ್ಯರು ತುರ್ತಾಗಿ ಹೇಗೆ ಚಿಕಿತ್ಸೆ ನೀಡಬೇಕು ? ಯಾವ ಇಂಜೆಕ್ಷನ್​ ಕೊಡಬೇಕು ? ಯಾವೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಬೇಕು ಅಂತ ಸೂಚನೆ ನೀಡುತ್ತಾರೆ.

Automated External Defibrillators ಅಂದ್ರೆ ಏನು..?

ಈ AED ಸ್ವಯಂಚಾಲಿತ ಎಲೆಕ್ಟ್ರಾನಿಕ್ ಸಾಧನವಾಗಿದೆ. ಹೃದಯಘಾತದ ಸಮಯದಲ್ಲಿ AED ಸಾಧನ ಮಾರಣಾಂತಿಕ ಹೃದಯಾಘಾತ ತೀವ್ರತೆ ಅಳೆಯುತ್ತದೆ. ಹೃದಯಘಾತದ ತೀವ್ರತೆ ತಿಳಿದು ಸ್ವಯಂಚಾಲಿತವಾಗಿ ತುರ್ತು ಚಿಕಿತ್ಸೆ ನೀಡುತ್ತದೆ. ಕೆಲವು ಸಂದರ್ಭದಲ್ಲಿ AED ಹೃದಯಘಾತ ತಕ್ಕಂತೆ ಎಲೆಕ್ಟ್ರಿಕ್ ಶಾಕ್ ಅಥವಾ ಡಿಫಿಬ್ರಿಲೇಶನ್ ನೀಡಲು ಸಾಹಯ ಮಾಡುತ್ತೆ. ಇಲ್ಲಿ ತುರ್ತು ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆದು ನಂತರ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬಹುದಾಗಿದೆ. ಪ್ರಾರಂಭಿಕ ಹಂತದಲ್ಲಿ 45 ಆಸ್ಪತ್ರೆಗಳಲ್ಲಿ Automated External Defibrillators (AED) ಗಳನ್ನು ಆಸ್ಪತ್ರೆಗಳಲ್ಲಿ ಅಳವಡಿಸಲು ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಸ್ಥಳಗಳಲ್ಲೂ AED ಸಾಧನ ಅಳವಡಿಕೆ

ಹಠಾತ್ ಹೃದಯಾಘಾತ ತಡೆಯಲು  ನಟ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಯೋಜನೆಗೆ ಚಾಲನೆ ನೀಡಲು ಮುಂದಾಗಿದ್ದೇವೆ.  ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ “ಅಪ್ಪು ಯೋಜನೆ” ಜಾರಿಗೆ ಮಾಡುತ್ತೇವೆ. ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED ) ಅಳವಡಿಕೆ ಮಾಡಲಾಗುತ್ತೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಏರಪೋರ್ಟ್ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೇ ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್​​ನಲ್ಲಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡುತ್ತೇವೆ. ರೋಗಿಯನ್ನು ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಹೃದಯಘಾತದ ಸಮಯದಲ್ಲಿ ಆಸ್ಪತ್ರೆಗೆ ಶಿಫ್ಟ್ ವೇಳೆಯಲ್ಲಿಯೇ ಮೃತರಾಗುತ್ತಿದ್ದಾರೆ. ಬಜೆಟ್​ನಲ್ಲಿ ಹೇಳಿದ್ದಂತೆ ಈ ಯೋಜನೆ ಜಾರಿ ಮಾಡಲಾಗುತ್ತೆ. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿ ಮಾಡುತ್ತೇವೆ. ಸಾರ್ವಜನಿಕ ಸ್ಥಳಗಳಲ್ಲಿಯೂ ಎಇಡಿ ಸಾಧನದ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವುದಕ್ಕೆ ಮುಂದಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:43 am, Sun, 20 August 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ