AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕದ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಟೆಂಡರ್ ವಿಳಂಬಕ್ಕೆ ತಾಂತ್ರಿಕ ಕಾರಣ ನೀಡಿರುವ ಅವರು, ಶೇ 75 ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆಯಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Vinay Kashappanavar
| Edited By: |

Updated on: Nov 18, 2024 | 2:05 PM

Share

ಬೆಂಗಳೂರು, ನವೆಂಬರ್ 18: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್ ಎಂಬ ವರದಿ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ 40 ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75 ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

ತಾಂತ್ರಿಕ ಕಾರಣದಿಂದ ಟೆಂಡರ್​ ವಿಳಂಬವಾಗಿದೆ ಎಂದ ಅವರು, ಈ ವರ್ಷವೂ ಇಂಡೆಂಟ್​ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ, ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧ ಇದೆ ಎಂದರು.

ಇಲ್ಲದ ಔಷಧ ಖರೀದಿಗೆ ಸೂಚನೆ: ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂಥವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ಅಗತ್ಯ ಔಷಧಗಳು ಇಲ್ಲದಿರುವುದು ಲಭ್ಯ ದಾಖಲೆಗಳಿಂದ ತಿಳಿದುಬಂದಿತ್ತು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಔಷಧ ಸಂಗ್ರಹ ದಾಖಲೆಗಳಿಂದ ತಿಳಿದುಬಂದಿತ್ತು. ವಿಶೇಷವೆಂದರೆ, ಇದೀಗ ಆರೋಗ್ಯ ಸಚಿವರು ಔಷಧ ಕೊರತೆಯನ್ನು ನಿರಾಕರಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ