AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕದ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಟೆಂಡರ್ ವಿಳಂಬಕ್ಕೆ ತಾಂತ್ರಿಕ ಕಾರಣ ನೀಡಿರುವ ಅವರು, ಶೇ 75 ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆಯಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ವಿನಯ್​ ಕಾಶಪ್ಪನವರ್​
| Edited By: |

Updated on: Nov 18, 2024 | 2:05 PM

Share

ಬೆಂಗಳೂರು, ನವೆಂಬರ್ 18: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್ ಎಂಬ ವರದಿ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ 40 ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75 ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

ತಾಂತ್ರಿಕ ಕಾರಣದಿಂದ ಟೆಂಡರ್​ ವಿಳಂಬವಾಗಿದೆ ಎಂದ ಅವರು, ಈ ವರ್ಷವೂ ಇಂಡೆಂಟ್​ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ, ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧ ಇದೆ ಎಂದರು.

ಇಲ್ಲದ ಔಷಧ ಖರೀದಿಗೆ ಸೂಚನೆ: ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂಥವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ಅಗತ್ಯ ಔಷಧಗಳು ಇಲ್ಲದಿರುವುದು ಲಭ್ಯ ದಾಖಲೆಗಳಿಂದ ತಿಳಿದುಬಂದಿತ್ತು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಔಷಧ ಸಂಗ್ರಹ ದಾಖಲೆಗಳಿಂದ ತಿಳಿದುಬಂದಿತ್ತು. ವಿಶೇಷವೆಂದರೆ, ಇದೀಗ ಆರೋಗ್ಯ ಸಚಿವರು ಔಷಧ ಕೊರತೆಯನ್ನು ನಿರಾಕರಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು