AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಘೀ ತಡೆಗಟ್ಟಲು ಆಸ್ಪತ್ರೆ, ಪಾಲಿಕೆಗಳಿಗೆ ಸೂಚನೆ ನೀಡಿದ್ದೇವೆ: ಶರಣ ಪ್ರಕಾಶ್​​​, ಗುಂಡೂರಾವ್​

​ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ. ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ಡೆಂಘೀ ತಡೆಗಟ್ಟಲು ಆಸ್ಪತ್ರೆ, ಪಾಲಿಕೆಗಳಿಗೆ ಸೂಚನೆ ನೀಡಿದ್ದೇವೆ: ಶರಣ ಪ್ರಕಾಶ್​​​, ಗುಂಡೂರಾವ್​
ಶರಣ ಪ್ರಕಾಶ್​ ಪಾಟೀಲ್​, ದಿನೇಶ್​ ಗುಂಡೂರಾವ್​​
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Jun 22, 2024 | 12:48 PM

Share

ಬೆಂಗಳೂರು, ಜೂನ್​ 22: ರಾಜ್ಯಾದ್ಯಂತ ಡೆಂಘೀ (Dengue) ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲ ಆಸ್ಪತ್ರೆಗಳಿಗೂ ಅಲರ್ಟ್​​ ಆಗಿರುವಂತೆ ಸೂಚಿಸಿದ್ದೇನೆ. ಮಳೆಗಾಲ ಆರಂಭವಾಗಿದ್ದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಾನಗರ ಪಾಲಿಕೆಗಳಿಗೆ ಎಲ್ಲ ಸೂಚನೆ ನೀಡಲಾಗಿದೆ. ಫಾಗಿಂಗ್ ಸಿಂಪರಣೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಹೇಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharan Prakash Patil) ಹೇಳಿದರು.

ಈಗಾಗಲೇ ಸರ್ಕಾರದಿಂದ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೆ ಸೂಚನೆ ನೀಡಿದ್ದೇವೆ. ಕಲಬುರಗಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಇವತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇವೆ ಎಂದು ತಿಳಿಸಿದರು.

ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆ ಉಂಟಾಗಿರುವ ವಿಚಾರವಾಗಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿ ಯಾವುದೇ ಲೋಪವಾಗಿಲ್ಲ. ಭಾರಿ ಮಳೆಯಿಂದ ಮಣ್ಣು ಮಿಶ್ರಿತ ನೀರು ಸರಬರಾಜು ಆಗಿದೆ. ಹೀಗಾಗಿ ಕೆಲ ಕಾಲ ಆಪರೇಷನ್ ಮುಂದೂಡಲಾಗಿತ್ತು. ವಿಪಕ್ಷ ನಾಯಕ ಅಶೋಕ್ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಅಶೋಕ್ ಕೆಲಸ ನೋಡಿ ನಗು ಬರುತ್ತೆ. ಆರ್​​.ಅಶೋಕ್ ಪತ್ರ ಬರೆಯಲಿ ನಾವು ಪರಿಶೀಲನೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ಡೆಂಘೀಯಿಂದ ಮೃತರ ಸಂಖ್ಯೆ ಕಡಿಮೆ: ದಿನೇಶ್ ಗುಂಡೂರಾವ್

ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ. ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸೊಳ್ಳೆಗಳ ಮೂಲಕ ಡೆಂಘೀ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.

ಹಾವೇರಿಯಲ್ಲಿ 389 ಡೆಂಘೀ ಕೇಸ್ ಪತ್ತೆ

ಹಾವೇರಿ ಜಿಲ್ಲೆಯಾದ್ಯಂತ ಡೆಂಘೀ ಅಬ್ಬರ ಜೋರಾಗಿದೆ. ಈವರೆಗೆ 389 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಡೆಂಘೀ ಇಬ್ಬರು ಮೃತಪಟ್ಟಿದ್ದಾರೆ. ಜನವರಿಯಿಂದ ಇಲ್ಲಿವರೆಗೆ 2310 ಜನರಿಗೆ ಡೆಂಘೀ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 389 ಜನರಿಗೆ ಡೆಂಘೀ ದೃಢಪಟ್ಟಿದೆ. ಇದರಲ್ಲಿ 375 ಜನರು ಈಗಾಗಲೇ ಗುಣಮುಖರಾಗಿದ್ದಾರೆ. 12 ಡೆಂಘೀ ಪಿಡಿತರು ಹಾವೇರಿ ಜಿಲ್ಲಾಸ್ಪತ್ರೆ, ಹಾನಗಲ್ಲ, ಹುಬ್ಬಳ್ಳಿ, ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಿ ಡೆಂಘೀಗೆ ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ