AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ

Remdesivir: ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
|

Updated on: May 11, 2021 | 8:36 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಅವಘಡಗಳೂ ಸಂಭವಿಸಿವೆ. ಕೆಲ ಹಣಬಾಕರು ಇದೇ ಸಂದರ್ಭವನ್ನೇ ಉಪಯೋಗಿಸಿಕೊಂಡು ಹಣ ಮಾಡಿದ್ದೂ ಆಗಿದೆ. ಅದರಲ್ಲೂ ಕೊರೊನಾ ಸೋಂಕಿತರಿಗೆ ಜೀವ ರಕ್ಷಕ ಎಂದು ಬಿಂಬಿಸಲ್ಪಟ್ಟಿರುವ ರೆಮ್​ಡಿಸಿವಿರ್​ ಇಂಜೆಕ್ಷನ್​ಗೆ ಈ ಬಾರಿ ಬೇಡಿಕೆ ಹೆಚ್ಚಿದ್ದು ಅದನ್ನೇ ಅಕ್ರಮವಾಗಿ ಮಾರಾಟ ಮಾಡಿ ಹಣ ಹುಟ್ಟಿಸಿಕೊಳ್ಳುವ ದೊಡ್ಡ ದಂಧೆಯೂ ನಡೆಯುತ್ತಿದೆ. ಹೀಗಾಗಿ ಇಂತಹ ಅಕ್ರಮಗಳಿಗೆ ತಡೆಯೊಡ್ಡಲೋಸುಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ.

ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಬಿಕರಿಯಾಗುವುದನ್ನು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ಕೊರೊನಾ ಸೋಂಕಿತರ ಮೊಬೈಲ್​ಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ವಿತರಣೆಯ ಬಗ್ಗೆ ಸಂದೇಶ ಕಳುಹಿಸಲು ನಿರ್ಧರಿಸಿದೆ. ಇದರಿಂದಾಗಿ ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ. ಈ ಯೋಜನೆ ಸಮರ್ಪಕವಾಗಿ ಜಾರಿಯಾದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ರೆಮ್​ಡಿಸಿವಿರ್ ಹೆಸರಲ್ಲಿ ದುಡ್ಡು ಮಾಡುತ್ತಿದ್ದ ದಂಧೆಯನ್ನು ಮಟ್ಟಹಾಕಲು ಪರಿಣಾಮಕಾರಿ ಅಸ್ತ್ರ ಸಿಕ್ಕಂತಾಗುತ್ತದೆ.

ಸದ್ಯ ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಪಡೆದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಸರ್ಕಾರದಿಂದ ರೆಮ್​ಡಿಸಿವಿರ್ ವಿತರಣೆ ಆಗೇ ಇಲ್ಲವೆಂದು ಸುಳ್ಳು ಹೇಳುತ್ತಿರುವ ಈ ಆಸ್ಪತ್ರೆಗಳು ತಮಗೆ ಸಿಕ್ಕ ಚುಚ್ಚುಮದ್ದನ್ನು ಬೇಕಾದಂತೆ ಮಾರಾಟ ಮಾಡುತ್ತಿವೆ. ಇತ್ತ ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಕೂಡ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದೀಗ ಈ ಎಲ್ಲಾ ಅಕ್ರಮಗಳಿಗೂ ಕಡಿವಾಣ ಹಾಕಲು ಅಂತಿಮವಾಗಿ ಆರೋಗ್ಯ ಇಲಾಖೆಯೇ ಯೋಜನೆ ರೂಪಿಸಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು