AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ

Remdesivir: ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
|

Updated on: May 11, 2021 | 8:36 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಅವಘಡಗಳೂ ಸಂಭವಿಸಿವೆ. ಕೆಲ ಹಣಬಾಕರು ಇದೇ ಸಂದರ್ಭವನ್ನೇ ಉಪಯೋಗಿಸಿಕೊಂಡು ಹಣ ಮಾಡಿದ್ದೂ ಆಗಿದೆ. ಅದರಲ್ಲೂ ಕೊರೊನಾ ಸೋಂಕಿತರಿಗೆ ಜೀವ ರಕ್ಷಕ ಎಂದು ಬಿಂಬಿಸಲ್ಪಟ್ಟಿರುವ ರೆಮ್​ಡಿಸಿವಿರ್​ ಇಂಜೆಕ್ಷನ್​ಗೆ ಈ ಬಾರಿ ಬೇಡಿಕೆ ಹೆಚ್ಚಿದ್ದು ಅದನ್ನೇ ಅಕ್ರಮವಾಗಿ ಮಾರಾಟ ಮಾಡಿ ಹಣ ಹುಟ್ಟಿಸಿಕೊಳ್ಳುವ ದೊಡ್ಡ ದಂಧೆಯೂ ನಡೆಯುತ್ತಿದೆ. ಹೀಗಾಗಿ ಇಂತಹ ಅಕ್ರಮಗಳಿಗೆ ತಡೆಯೊಡ್ಡಲೋಸುಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ.

ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಬಿಕರಿಯಾಗುವುದನ್ನು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ಕೊರೊನಾ ಸೋಂಕಿತರ ಮೊಬೈಲ್​ಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ವಿತರಣೆಯ ಬಗ್ಗೆ ಸಂದೇಶ ಕಳುಹಿಸಲು ನಿರ್ಧರಿಸಿದೆ. ಇದರಿಂದಾಗಿ ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ. ಈ ಯೋಜನೆ ಸಮರ್ಪಕವಾಗಿ ಜಾರಿಯಾದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ರೆಮ್​ಡಿಸಿವಿರ್ ಹೆಸರಲ್ಲಿ ದುಡ್ಡು ಮಾಡುತ್ತಿದ್ದ ದಂಧೆಯನ್ನು ಮಟ್ಟಹಾಕಲು ಪರಿಣಾಮಕಾರಿ ಅಸ್ತ್ರ ಸಿಕ್ಕಂತಾಗುತ್ತದೆ.

ಸದ್ಯ ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಪಡೆದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಸರ್ಕಾರದಿಂದ ರೆಮ್​ಡಿಸಿವಿರ್ ವಿತರಣೆ ಆಗೇ ಇಲ್ಲವೆಂದು ಸುಳ್ಳು ಹೇಳುತ್ತಿರುವ ಈ ಆಸ್ಪತ್ರೆಗಳು ತಮಗೆ ಸಿಕ್ಕ ಚುಚ್ಚುಮದ್ದನ್ನು ಬೇಕಾದಂತೆ ಮಾರಾಟ ಮಾಡುತ್ತಿವೆ. ಇತ್ತ ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಕೂಡ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದೀಗ ಈ ಎಲ್ಲಾ ಅಕ್ರಮಗಳಿಗೂ ಕಡಿವಾಣ ಹಾಕಲು ಅಂತಿಮವಾಗಿ ಆರೋಗ್ಯ ಇಲಾಖೆಯೇ ಯೋಜನೆ ರೂಪಿಸಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!