AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ

Remdesivir: ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ.

ರೆಮ್​ಡಿಸಿವಿರ್​ ದಂಧೆಗೆ ಆರೋಗ್ಯ ಇಲಾಖೆ ಇಂಜೆಕ್ಷನ್; ಚುಚ್ಚುಮದ್ದು ಬಿಡುಗಡೆಯಾದ ಕೂಡಲೇ ಸೋಂಕಿತರ ಮೊಬೈಲ್​ಗೆ ಸಂದೇಶ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
|

Updated on: May 11, 2021 | 8:36 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಅವಘಡಗಳೂ ಸಂಭವಿಸಿವೆ. ಕೆಲ ಹಣಬಾಕರು ಇದೇ ಸಂದರ್ಭವನ್ನೇ ಉಪಯೋಗಿಸಿಕೊಂಡು ಹಣ ಮಾಡಿದ್ದೂ ಆಗಿದೆ. ಅದರಲ್ಲೂ ಕೊರೊನಾ ಸೋಂಕಿತರಿಗೆ ಜೀವ ರಕ್ಷಕ ಎಂದು ಬಿಂಬಿಸಲ್ಪಟ್ಟಿರುವ ರೆಮ್​ಡಿಸಿವಿರ್​ ಇಂಜೆಕ್ಷನ್​ಗೆ ಈ ಬಾರಿ ಬೇಡಿಕೆ ಹೆಚ್ಚಿದ್ದು ಅದನ್ನೇ ಅಕ್ರಮವಾಗಿ ಮಾರಾಟ ಮಾಡಿ ಹಣ ಹುಟ್ಟಿಸಿಕೊಳ್ಳುವ ದೊಡ್ಡ ದಂಧೆಯೂ ನಡೆಯುತ್ತಿದೆ. ಹೀಗಾಗಿ ಇಂತಹ ಅಕ್ರಮಗಳಿಗೆ ತಡೆಯೊಡ್ಡಲೋಸುಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ.

ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಬಿಕರಿಯಾಗುವುದನ್ನು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ಕೊರೊನಾ ಸೋಂಕಿತರ ಮೊಬೈಲ್​ಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ವಿತರಣೆಯ ಬಗ್ಗೆ ಸಂದೇಶ ಕಳುಹಿಸಲು ನಿರ್ಧರಿಸಿದೆ. ಇದರಿಂದಾಗಿ ಸೋಂಕಿತರಿಗೆ ನೇರವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಸರಬರಾಜಾಗಲಿದ್ದು, ಚುಚ್ಚುಮದ್ದು ಬಿಡುಗಡೆಯಾಗುತ್ತಿದ್ದಂತೆಯೇ ಮೊಬೈಲ್​ಗೆ ಸಂದೇಶ ರವಾನೆ ಆಗಲಿದೆ. ಈ ಯೋಜನೆ ಸಮರ್ಪಕವಾಗಿ ಜಾರಿಯಾದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ರೆಮ್​ಡಿಸಿವಿರ್ ಹೆಸರಲ್ಲಿ ದುಡ್ಡು ಮಾಡುತ್ತಿದ್ದ ದಂಧೆಯನ್ನು ಮಟ್ಟಹಾಕಲು ಪರಿಣಾಮಕಾರಿ ಅಸ್ತ್ರ ಸಿಕ್ಕಂತಾಗುತ್ತದೆ.

ಸದ್ಯ ಕೆಲ ಖಾಸಗಿ ಆಸ್ಪತ್ರೆಗಳು ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಪಡೆದು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಸರ್ಕಾರದಿಂದ ರೆಮ್​ಡಿಸಿವಿರ್ ವಿತರಣೆ ಆಗೇ ಇಲ್ಲವೆಂದು ಸುಳ್ಳು ಹೇಳುತ್ತಿರುವ ಈ ಆಸ್ಪತ್ರೆಗಳು ತಮಗೆ ಸಿಕ್ಕ ಚುಚ್ಚುಮದ್ದನ್ನು ಬೇಕಾದಂತೆ ಮಾರಾಟ ಮಾಡುತ್ತಿವೆ. ಇತ್ತ ಸೋಂಕಿತರ ಹೆಸರಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಕೂಡ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದೀಗ ಈ ಎಲ್ಲಾ ಅಕ್ರಮಗಳಿಗೂ ಕಡಿವಾಣ ಹಾಕಲು ಅಂತಿಮವಾಗಿ ಆರೋಗ್ಯ ಇಲಾಖೆಯೇ ಯೋಜನೆ ರೂಪಿಸಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ