AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಿಸಿಗಾಳಿ ಹೆಚ್ಚಳ: ಆರೋಗ್ಯ ಇಲಾಖೆ ಮಾರ್ಗಸೂಚಿ, ಹೆಚ್ಚು ನೀರು ಕುಡಿಯುವಂತೆ ಸಲಹೆ

ಬೇಸಿಗೆಯ ತೀವ್ರ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೆಚ್ಚು ನೀರು ಕುಡಿಯುವುದು, ತಿಳಿ ಬಣ್ಣದ ಬಟ್ಟೆ ಧರಿಸುವುದು, ಬಿಸಿಲಿನಿಂದ ರಕ್ಷಣೆ ಪಡೆಯುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ. ORS, ನಿಂಬೆ ಜ್ಯೂಸ್, ಮಜ್ಜಿಗೆ, ನೀರಿನಂಶ ಹೊಂದಿರುವ ಹಣ್ಣು ಮತ್ತು ತರಕಾರಿಗಳ ಸೇವಿಸುವಂತೆ ಸಲಹೆ ನೀಡಲಾಗಿದೆ.

ಕರ್ನಾಟಕದಲ್ಲಿ ಬಿಸಿಗಾಳಿ ಹೆಚ್ಚಳ: ಆರೋಗ್ಯ ಇಲಾಖೆ ಮಾರ್ಗಸೂಚಿ, ಹೆಚ್ಚು ನೀರು ಕುಡಿಯುವಂತೆ ಸಲಹೆ
ಕರ್ನಾಟಕದಲ್ಲಿ ಬಿಸಿಗಾಳಿ ಹೆಚ್ಚಳ: ಆರೋಗ್ಯ ಇಲಾಖೆ ಮಾರ್ಗಸೂಚಿ, ಹೆಚ್ಚು ನೀರು ಕುಡಿಯುವಂತೆ ಸಲಹೆ
Vinay Kashappanavar
| Edited By: |

Updated on: Mar 02, 2025 | 10:01 PM

Share

ಬೆಂಗಳೂರು, ಮಾರ್ಚ್​​ 02: ಈ ಭಾರಿ ಕರ್ನಾಟಕದಲ್ಲಿ ಫೆಬ್ರವರಿಯಲ್ಲೇ ವಿಪರೀತ ಬಿಸಿಲು (Summer Heat) ಆರಂಭವಾಗಿದೆ. ಬಿಸಿಲಿನ ಪ್ರಭಾವ ಕಂಡು ಜನರು ಹೈರಾಣಾಗಿದ್ದಾರೆ. ಚಳಿಗಾಲದಲ್ಲೇ ಇಷ್ಟರ ಮಟ್ಟಿಗೆ ಬಿಸಿಲಿದ್ದು, ಬೇಸಿಗೆಯಲ್ಲಿ ಗರಿಷ್ಟ ಉಷ್ಣಾಂಶ ಎಷ್ಟು ಇರಲಿದೆ ಎಂದು ಇತ್ತೀಚೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಹೆಚ್ಚಳ ಹಿನ್ನೆಲೆ ಕೆಲ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ನೀಡಿದೆ.

ಹೆಚ್ಚು ನೀರು ಕುಡಿಯುವಂತೆ ಆರೋಗ್ಯ ಇಲಾಖೆ ಸಲಹೆ

ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಹೆಚ್ಚು ನೀರು ಕುಡಿಯುವಂತೆ, ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರನ್ನು ಆಗಾಗ ಸೇವಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ: ಈ ಬಾರಿ ಉತ್ತರ ಕರ್ನಾಟಕದಲ್ಲಿ ರಣಭೀಕರ ಬೇಸಿಗೆ ಬಿಸಿಲು: ಉಷ್ಣ ಅಲೆ ಎಚ್ಚರಿಕೆ

ಇದನ್ನೂ ಓದಿ
Image
ಈ ಬಾರಿ ಉತ್ತರ ಕರ್ನಾಟಕದಲ್ಲಿ ರಣಭೀಕರ ಬೇಸಿಗೆ ಬಿಸಿಲು: ಉಷ್ಣ ಅಲೆ ಎಚ್ಚರಿಕೆ
Image
Karnataka Weather: ಮುಂದಿನ ಒಂದು ವಾರ ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ
Image
ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು?
Image
ಬೇಸಿಗೆ ಜೊತೆಗೆ ಮಕ್ಕಳಲ್ಲಿ ಶುರುವಾಯ್ತು ಇನ್ಫೆಕ್ಷನ್​​ ಹಾವಳಿ

ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಸಮಯದಲ್ಲೂ ಕುಡಿಯುವ ನೀರು ಜೊತೆಗೆ ಇರಬೇಕು. ಮೌಖಿಕ ಮನರ್ಜಲೀಕರಣ ದ್ರಾವಣ (ORS), ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಜ್ಯೂಸ್‌, ಮಜ್ಜಿಗೆ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬಹುದಾಗಿದೆ.

ಋತುಮಾನದಲ್ಲಿ ಲಭ್ಯವಿರುವ, ಹೆಚ್ಚು ನೀರಿನಂಶ ಹೊಂದಿರುವ ಹಣ್ಣು, ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟ್ಯೂಸ್, ಎಳನೀರು ಹೆಚ್ಚಾಗಿ ಸೇವಿಸಿ. ಹೆಚ್ಚು ಬಿಸಿಲು ಬೀಳದಂತೆ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಹಾಗಾಗಿ ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…

ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್‌, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ. ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂಗಳನ್ನು ಧರಿಸುವಂತೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ