AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ. ನ್ಯಾ. ಅನಂತ್ ರಾಮನಾಥ್ ಹೆಗ್ಡೆ, ನ್ಯಾ. ಸಿದ್ದಯ್ಯ ರಾಚಯ್ಯ, ನ್ಯಾ. ಕೆ.ಎಸ್.ಹೇಮಲೇಖ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ.

ಕರ್ನಾಟಕ ಹೈಕೋರ್ಟ್​ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
ಕರ್ನಾಟಕ ಹೈಕೋರ್ಟ್‌
TV9 Web
| Edited By: |

Updated on: Nov 03, 2021 | 9:54 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ. ನ್ಯಾ. ಅನಂತ್ ರಾಮನಾಥ್ ಹೆಗ್ಡೆ, ನ್ಯಾ. ಸಿದ್ದಯ್ಯ ರಾಚಯ್ಯ, ನ್ಯಾ. ಕೆ.ಎಸ್.ಹೇಮಲೇಖ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ. ಮೂವರೂ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಅದರಂತೆ ಕರ್ನಾಟಕ ಹೈಕೋರ್ಟ್​ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಅಕ್ಟೋಬರ್ 11ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಂದ ಪ್ರಮಾಣ ವಚನ ಬೋಧನೆ ಮಾಡಲಾಗಿತ್ತು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಚಿವ ಗೋವಿಂದ ಕಾರಜೋಳ, ಸಿಎಸ್ ರವಿಕುಮಾರ್, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ, ಎಜಿ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವಸ್ಥಿ ಇದೀಗ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಿಸಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿತ್ತು. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿತ್ತು

ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್​ ಗರಂ

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ